Advertisement
MIRROR FOCUS

ಗ್ರಾಮೀಣ ಭಾಗದ ವಿದ್ಯಾರ್ಥಿ ಸಾಧನೆ | ಜೆಇಇ ಪರೀಕ್ಷೆಯಲ್ಲಿ ಶೇ.97 ಅಂಕ ಪಡೆದ ಸಾತ್ವಿಕ್‌ | ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ |

Share

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡಾ ಸಾಧನೆ ಮಾಡಬಲ್ಲರು. ಅಂತಹ ಹತ್ತಾರು ಉದಾಹರಣೆಗಳು ಇವೆ. ಇದೀಗ ಇನ್ನೊಂದು ಸಾಧನೆ ಗ್ರಾಮೀಣ ಭಾಗದ ವಿದ್ಯಾರ್ಥಿಯೊಬರಬು ಮಾಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಪದವಿಪೂರ್ವ ವಿಭಾಗದ ವಿದ್ಯಾರ್ಥಿ ಸಾತ್ವಿಕ್‌ ಜೆಇಇ ಪರೀಕ್ಷೆಯಲ್ಲಿ ಶೇ.97.91 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ಕುಮಾರಸ್ವಾಮಿ ವಿದ್ಯಾಲಯದ ಪಿಯುಸಿ ವಿಭಾಗದ ಮೊದಲ ಬ್ಯಾಚ್‌ನ ವಿದ್ಯಾರ್ಥಿ ಸಾತ್ವಿಕ್‌ ಜೆಇಇ(ಮೈನ್)‌ ಪರೀಕ್ಷೆಗೆ ಬರೆದಿದ್ದರು. ಈಗ ಅವರು ಶೇ.97.91 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ. ಇದಕ್ಕೆ ಕಾರಣವೂ ಇದೆ. ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ ಸಾತ್ವಿಕ್‌, ಜೆಇಇ ಪರೀಕ್ಷೆಯನ್ನು ಹೆಚ್ಚಿನ ತರಬೇತಿ ಇಲ್ಲದೆ ಬರೆದಿದ್ದಾರೆ. ಆರಂಭದಲ್ಲಿ ಆನ್‌ ಲೈನ್‌ ಮೂಲಕ ತರಬೇತಿ ಪಡೆಯುತ್ತಿದ್ದರು. ನಂತರ ಕಾಲೇಜು ಪ್ರಾಂಶುಪಾಲ ಡಾ.ಸಂಕೀರ್ತ್‌ ಹೆಬ್ಬಾರ್‌ ಅವರಿಂದ ತರಬೇತಿ ಪಡೆಯುತ್ತಿದ್ದರು.

ಸಾತ್ವಿಕ್

ಗ್ರಾಮೀಣ ಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ಹಾಗೂ ಜೆಇಇ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿರುವ ಸಾತ್ವಿಕ್‌ ಹೀಗೆ ಹೇಳುತ್ತಾರೆ, ಪ್ರಕೃತಿ ಸೌಂದರ್ಯದ ನಡುವೆ ಪ್ರಶಾಂತವಾದ ವಾತಾವರಣದಲ್ಲಿ ಒತ್ತಡ ರಹಿತವಾಗಿ ಓದಲು ಅನುಕೂಲವಾಗಿದೆ.ಇಂತಹ ಅವಕಾಶ ನೀಡಿರುವ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಗೆ ಹಾಗೂ ಶಿಕ್ಷಕರಿಗೆ ಆಭಾರಿಯಾಗಿದ್ದೇನೆ. ಶಿಕ್ಷಣಕ್ಕೆ ಆದ್ಯತೆ ಹಾಗೂ ಸಕಾರಾತ್ಮಕ ಅಂಶಗಳನ್ನ ಒಳಗೊಂಡ ಒಳ್ಳೆಯ ವಾತಾವರಣ ಇಲ್ಲಿ ಸೃಷ್ಟಿಯಾಗಿರುವುದು ಕಲಿಯುವುದಕ್ಕೆ ಹೆಚ್ಚು ಸಾಧ್ಯವಾಯಿತು ಎನ್ನುತ್ತಾರೆ.

ಎಸ್‌ಎಸ್‌ಎಲ್‌ಸಿ ಯಲ್ಲೂ ಉತ್ತಮ ಸಾಧನೆ ಮಾಡಿರುವ ಸಾತ್ವಿಕ್‌ ಈ ಬಾರಿ ಕೂಡಾ ವಿಶೇಷವಾದ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಕೂಡಾ ವಿದ್ಯಾರ್ಥಿಗಳು ಸಾಧನೆ ಮಾಡಬಹುದು ಎಂದು ಸಾಧಿಸಿದ್ದಾರೆ ಹಾಗೂ ಇತರ ವಿದ್ಯಾರ್ಥಿಗಳಿಗೂ ಮಾದರಿಯಾಗಿದ್ದಾರೆ.‌ ಸಾತ್ವಿಕ್‌ ಅವರು ಡಾ.ಶಶಿಧರ್‌ ಹಾಗೂ ಡಾ.ಅನುಪಮ ಅವರ ಪುತ್ರ.

Satvik, student of Kumaraswamy Vidyalaya in KukkeSubrahmanya, scored the best in the JEE exam

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

12 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

13 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

14 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

14 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

14 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

15 hours ago