ಕೃಷಿ ಯಂತ್ರಗಳ ಸುಧಾರಕ ಕೋಡಿಬೈಲು ಸತ್ಯನಾರಾಯಣ ಇನ್ನಿಲ್ಲ | ಪುತ್ತೂರಿನಲ್ಲಿ ಸ್ಕೂಟರ್-ಲಾರಿ ನಡುವೆ ಭೀಕರ ಅಪಘಾತ |

May 17, 2021
10:43 AM

ಕೃಷಿ ಯಂತ್ರಗಳ ಸುಧಾರಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರು ಮಾಡಿದ್ದ ಬೆಳ್ಳಾರೆ ಸತ್ಯನಾರಾಯಣ ಕೋಡಿಬೈಲು ಪುತ್ತೂರಿನಲ್ಲಿ  ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಸೋಮವಾರ ಬೆಳಗ್ಗೆ ಮಾಣಿ ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್‌ ತೆಂಕಿಲದಲ್ಲಿ ಸ್ಕೂಟರ್‌ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಸತ್ಯನಾರಾಯಣ ಕೋಡಿಬೈಲು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸತ್ಯನಾರಾಯಣ ಕೋಡಿಬೈಲು ಅವರು ಸ್ಕೂಟರ್‌ ನಲ್ಲಿ  ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಲಾರಿ ಸ್ಕೂಟರ್‌ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಕೋಡಿಬೈಲು ಎಗ್ರೋ ಏಜೆನ್ಸಿಯ ಮೂಲಕ ದ ಕ ಜಿಲ್ಲೆ ಮಾತ್ರವಲ್ಲ ವಿವಿದೆಡೆ ಹೆಸರುವಾಸಿಯಾಗಿದ್ದ ಸತ್ಯನಾರಾಯಣ ಅವರು ಸ್ವತಃ ಕೃಷಿಕರಾಗಿ ಕೃಷಿ ಉಪಕರಣಗಳ ಆವಿಷ್ಕಾರಗಳಲ್ಲಿ  ಮುಂಚೂಣಿಯಲ್ಲಿದ್ದರು. ಅಡಿಕೆ ಔಷಧಿ ಸಿಂಪಡಣೆಗೆ ಯಂತ್ರ, ಮರ ಏರುವ ಯಂತ್ರ ಸೇರಿದಂತೆ ವಿವಿಧ ಯಂತ್ರಗಳ ಸುಧಾರಣೆಯಲ್ಲಿ ಕೃಷಿಕೃಾಗಿಯೂ ಆಸಕ್ತಿಯಿಂದ ಮುನ್ನಡೆಸುತ್ತಿದ್ದರು.  ವಿವಿಧ ಸಾಮಾಜಿಕ ಕೆಲಸ ಕಾರ್ಯಗಳಲ್ಲೂ ಸತ್ಯನಾರಾಯಣ ಕೋಡಿಬೈಲು ಮುಂಚೂಣಿಯಲ್ಲಿದ್ದರು.

55 ವರ್ಷಗಳ ಸತ್ಯನಾರಾಯಣ ಅವರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್

You cannot copy content of this page - Copyright -The Rural Mirror