ಸುದ್ದಿಗಳು

ಕೃಷಿ ಯಂತ್ರಗಳ ಸುಧಾರಕ ಕೋಡಿಬೈಲು ಸತ್ಯನಾರಾಯಣ ಇನ್ನಿಲ್ಲ | ಪುತ್ತೂರಿನಲ್ಲಿ ಸ್ಕೂಟರ್-ಲಾರಿ ನಡುವೆ ಭೀಕರ ಅಪಘಾತ |

Share

ಕೃಷಿ ಯಂತ್ರಗಳ ಸುಧಾರಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರು ಮಾಡಿದ್ದ ಬೆಳ್ಳಾರೆ ಸತ್ಯನಾರಾಯಣ ಕೋಡಿಬೈಲು ಪುತ್ತೂರಿನಲ್ಲಿ  ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Advertisement
Advertisement

ಸೋಮವಾರ ಬೆಳಗ್ಗೆ ಮಾಣಿ ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್‌ ತೆಂಕಿಲದಲ್ಲಿ ಸ್ಕೂಟರ್‌ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಸತ್ಯನಾರಾಯಣ ಕೋಡಿಬೈಲು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸತ್ಯನಾರಾಯಣ ಕೋಡಿಬೈಲು ಅವರು ಸ್ಕೂಟರ್‌ ನಲ್ಲಿ  ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಲಾರಿ ಸ್ಕೂಟರ್‌ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಕೋಡಿಬೈಲು ಎಗ್ರೋ ಏಜೆನ್ಸಿಯ ಮೂಲಕ ದ ಕ ಜಿಲ್ಲೆ ಮಾತ್ರವಲ್ಲ ವಿವಿದೆಡೆ ಹೆಸರುವಾಸಿಯಾಗಿದ್ದ ಸತ್ಯನಾರಾಯಣ ಅವರು ಸ್ವತಃ ಕೃಷಿಕರಾಗಿ ಕೃಷಿ ಉಪಕರಣಗಳ ಆವಿಷ್ಕಾರಗಳಲ್ಲಿ  ಮುಂಚೂಣಿಯಲ್ಲಿದ್ದರು. ಅಡಿಕೆ ಔಷಧಿ ಸಿಂಪಡಣೆಗೆ ಯಂತ್ರ, ಮರ ಏರುವ ಯಂತ್ರ ಸೇರಿದಂತೆ ವಿವಿಧ ಯಂತ್ರಗಳ ಸುಧಾರಣೆಯಲ್ಲಿ ಕೃಷಿಕೃಾಗಿಯೂ ಆಸಕ್ತಿಯಿಂದ ಮುನ್ನಡೆಸುತ್ತಿದ್ದರು.  ವಿವಿಧ ಸಾಮಾಜಿಕ ಕೆಲಸ ಕಾರ್ಯಗಳಲ್ಲೂ ಸತ್ಯನಾರಾಯಣ ಕೋಡಿಬೈಲು ಮುಂಚೂಣಿಯಲ್ಲಿದ್ದರು.

55 ವರ್ಷಗಳ ಸತ್ಯನಾರಾಯಣ ಅವರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

6 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

6 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

6 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

6 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

14 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

15 hours ago