Advertisement
ಸುದ್ದಿಗಳು

ಕೃಷಿ ಯಂತ್ರಗಳ ಸುಧಾರಕ ಕೋಡಿಬೈಲು ಸತ್ಯನಾರಾಯಣ ಇನ್ನಿಲ್ಲ | ಪುತ್ತೂರಿನಲ್ಲಿ ಸ್ಕೂಟರ್-ಲಾರಿ ನಡುವೆ ಭೀಕರ ಅಪಘಾತ |

Share

ಕೃಷಿ ಯಂತ್ರಗಳ ಸುಧಾರಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರು ಮಾಡಿದ್ದ ಬೆಳ್ಳಾರೆ ಸತ್ಯನಾರಾಯಣ ಕೋಡಿಬೈಲು ಪುತ್ತೂರಿನಲ್ಲಿ  ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಸೋಮವಾರ ಬೆಳಗ್ಗೆ ಮಾಣಿ ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್‌ ತೆಂಕಿಲದಲ್ಲಿ ಸ್ಕೂಟರ್‌ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಸತ್ಯನಾರಾಯಣ ಕೋಡಿಬೈಲು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸತ್ಯನಾರಾಯಣ ಕೋಡಿಬೈಲು ಅವರು ಸ್ಕೂಟರ್‌ ನಲ್ಲಿ  ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಲಾರಿ ಸ್ಕೂಟರ್‌ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಕೋಡಿಬೈಲು ಎಗ್ರೋ ಏಜೆನ್ಸಿಯ ಮೂಲಕ ದ ಕ ಜಿಲ್ಲೆ ಮಾತ್ರವಲ್ಲ ವಿವಿದೆಡೆ ಹೆಸರುವಾಸಿಯಾಗಿದ್ದ ಸತ್ಯನಾರಾಯಣ ಅವರು ಸ್ವತಃ ಕೃಷಿಕರಾಗಿ ಕೃಷಿ ಉಪಕರಣಗಳ ಆವಿಷ್ಕಾರಗಳಲ್ಲಿ  ಮುಂಚೂಣಿಯಲ್ಲಿದ್ದರು. ಅಡಿಕೆ ಔಷಧಿ ಸಿಂಪಡಣೆಗೆ ಯಂತ್ರ, ಮರ ಏರುವ ಯಂತ್ರ ಸೇರಿದಂತೆ ವಿವಿಧ ಯಂತ್ರಗಳ ಸುಧಾರಣೆಯಲ್ಲಿ ಕೃಷಿಕೃಾಗಿಯೂ ಆಸಕ್ತಿಯಿಂದ ಮುನ್ನಡೆಸುತ್ತಿದ್ದರು.  ವಿವಿಧ ಸಾಮಾಜಿಕ ಕೆಲಸ ಕಾರ್ಯಗಳಲ್ಲೂ ಸತ್ಯನಾರಾಯಣ ಕೋಡಿಬೈಲು ಮುಂಚೂಣಿಯಲ್ಲಿದ್ದರು.

55 ವರ್ಷಗಳ ಸತ್ಯನಾರಾಯಣ ಅವರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

4 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

4 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

19 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago