ಕೃಷಿ ಯಂತ್ರಗಳ ಸುಧಾರಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರು ಮಾಡಿದ್ದ ಬೆಳ್ಳಾರೆ ಸತ್ಯನಾರಾಯಣ ಕೋಡಿಬೈಲು ಪುತ್ತೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸೋಮವಾರ ಬೆಳಗ್ಗೆ ಮಾಣಿ ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್ ತೆಂಕಿಲದಲ್ಲಿ ಸ್ಕೂಟರ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಸತ್ಯನಾರಾಯಣ ಕೋಡಿಬೈಲು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸತ್ಯನಾರಾಯಣ ಕೋಡಿಬೈಲು ಅವರು ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಕೋಡಿಬೈಲು ಎಗ್ರೋ ಏಜೆನ್ಸಿಯ ಮೂಲಕ ದ ಕ ಜಿಲ್ಲೆ ಮಾತ್ರವಲ್ಲ ವಿವಿದೆಡೆ ಹೆಸರುವಾಸಿಯಾಗಿದ್ದ ಸತ್ಯನಾರಾಯಣ ಅವರು ಸ್ವತಃ ಕೃಷಿಕರಾಗಿ ಕೃಷಿ ಉಪಕರಣಗಳ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿದ್ದರು. ಅಡಿಕೆ ಔಷಧಿ ಸಿಂಪಡಣೆಗೆ ಯಂತ್ರ, ಮರ ಏರುವ ಯಂತ್ರ ಸೇರಿದಂತೆ ವಿವಿಧ ಯಂತ್ರಗಳ ಸುಧಾರಣೆಯಲ್ಲಿ ಕೃಷಿಕೃಾಗಿಯೂ ಆಸಕ್ತಿಯಿಂದ ಮುನ್ನಡೆಸುತ್ತಿದ್ದರು. ವಿವಿಧ ಸಾಮಾಜಿಕ ಕೆಲಸ ಕಾರ್ಯಗಳಲ್ಲೂ ಸತ್ಯನಾರಾಯಣ ಕೋಡಿಬೈಲು ಮುಂಚೂಣಿಯಲ್ಲಿದ್ದರು.
55 ವರ್ಷಗಳ ಸತ್ಯನಾರಾಯಣ ಅವರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…