ಕೃಷಿ ಯಂತ್ರಗಳ ಸುಧಾರಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರು ಮಾಡಿದ್ದ ಬೆಳ್ಳಾರೆ ಸತ್ಯನಾರಾಯಣ ಕೋಡಿಬೈಲು ಪುತ್ತೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸೋಮವಾರ ಬೆಳಗ್ಗೆ ಮಾಣಿ ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್ ತೆಂಕಿಲದಲ್ಲಿ ಸ್ಕೂಟರ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಸತ್ಯನಾರಾಯಣ ಕೋಡಿಬೈಲು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸತ್ಯನಾರಾಯಣ ಕೋಡಿಬೈಲು ಅವರು ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಕೋಡಿಬೈಲು ಎಗ್ರೋ ಏಜೆನ್ಸಿಯ ಮೂಲಕ ದ ಕ ಜಿಲ್ಲೆ ಮಾತ್ರವಲ್ಲ ವಿವಿದೆಡೆ ಹೆಸರುವಾಸಿಯಾಗಿದ್ದ ಸತ್ಯನಾರಾಯಣ ಅವರು ಸ್ವತಃ ಕೃಷಿಕರಾಗಿ ಕೃಷಿ ಉಪಕರಣಗಳ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿದ್ದರು. ಅಡಿಕೆ ಔಷಧಿ ಸಿಂಪಡಣೆಗೆ ಯಂತ್ರ, ಮರ ಏರುವ ಯಂತ್ರ ಸೇರಿದಂತೆ ವಿವಿಧ ಯಂತ್ರಗಳ ಸುಧಾರಣೆಯಲ್ಲಿ ಕೃಷಿಕೃಾಗಿಯೂ ಆಸಕ್ತಿಯಿಂದ ಮುನ್ನಡೆಸುತ್ತಿದ್ದರು. ವಿವಿಧ ಸಾಮಾಜಿಕ ಕೆಲಸ ಕಾರ್ಯಗಳಲ್ಲೂ ಸತ್ಯನಾರಾಯಣ ಕೋಡಿಬೈಲು ಮುಂಚೂಣಿಯಲ್ಲಿದ್ದರು.
55 ವರ್ಷಗಳ ಸತ್ಯನಾರಾಯಣ ಅವರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…