ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

May 1, 2024
10:52 AM
ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾದ ಎಚ್.ಎಮ್.ಕೃಷ್ಣಕುಮಾರ್ ಅವರ ಅಧಿಕಾರ ಅವಧಿ ಕೊನೆಗೊಳ್ಳುವುದರಿಂದ,ಮೇ 1 ರಿಂದ ಅನ್ವಯವಾಗುವಂತೆ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿದೆ.

Advertisement
Advertisement

ಕಳೆದ 50 ವರ್ಷಗಳಿಂದ ರೈತರ ಹಿತರಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾಂಪ್ಕೊದ ಆಡಳಿತ  ಮಂಡಳಿಯು ಎ.23 ರಂದು ತನ್ನ ಮಂಡಳಿ ಸಭೆಯಲ್ಲಿ ಸಂಸ್ಥೆಯನ್ನು ಮುನ್ನಡೆಸುವ ಮಹತ್ತರ ಜವಾಬ್ದಾರಿಯನ್ನು ಡಾ.ಬಿ.ವಿ.ಸತ್ಯನಾರಾಯಣ ಅವರಿಗೆ ವಹಿಸುವ ನಿರ್ಣಯವನ್ನು ಅವಿರೋಧವಾಗಿ ತೆಗೆದುಕೊಂಡಿದೆ.

ಡಾ.ಸತ್ಯನಾರಾಯಣ ಅವರು ಈ ಮೊದಲು ಕೆ.ಎಮ್.ಎಫ್ ನ ಘಟಕವಾದ ಬೆಂಗಳೂರಿನ ಮದರ್ ಡೈರಿಯ ನಿರ್ದೇಶಕರಾಗಿ, ಕೆ.ಎಮ್.ಎಫ್ ನ ಜಂಟಿ ನಿರ್ದೇಶಕರಾಗಿ,ದ.ಕ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಐಡಿಯಲ್ ಐಸ್ ಕ್ರೀಮ್ ನ ಮಾರುಕಟ್ಟೆ ವಿಭಾಗದ ಉಪಾಧ್ಯಕ್ಷರಾಗಿ ಉದ್ಯಮ ಕ್ಷೇತ್ರದಲ್ಲಿ ಅಗಾಧ ಜ್ಞಾನವನ್ನು ಹೊಂದಿರುತ್ತಾರೆ.ಅವರನ್ನು ಜನವರಿ 2024 ರಿಂದ ಕ್ಯಾಂಪ್ಕೊದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಿಕೊಂಡಿತ್ತು.

ಸಂಸ್ಥೆಯ ಅಧ್ಯಕ್ಷರಾದ ಎ.ಕಿಶೋರ್ ಕುಮಾರ್ ಕೊಡ್ಗಿ ಮತ್ತು ಆಡಳಿತ ಮಂಡಳಿ,ನೂತನವಾಗಿ ಆಯ್ಕೆಯಾದ ವ್ಯವಸ್ಥಾಪಕ ನಿರ್ದೇಶಕರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದೆ. ಕ್ಯಾಂಪ್ಕೊಗೆ ಸಂಬಂಧಿಸಿದ ಎಲ್ಲಾ ವಿಷಯಗಳಿಗೆ ಡಾ. ಸತ್ಯನಾರಾಯಣ ಅವರನ್ನು ದೂರವಾಣಿ ಸಂಖ್ಯೆ 0824-2425866/2888220/2888218 ಹಾಗೂ ಇಮೇಲ್ ಐಡಿ md@campco.org ಮೂಲಕ ಸಂಪರ್ಕಿಸಲು ತನ್ನ ಸದಸ್ಯರನ್ನು ಕೊಡ್ಗಿಯವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ
July 29, 2025
8:46 PM
by: The Rural Mirror ಸುದ್ದಿಜಾಲ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ
July 29, 2025
8:25 PM
by: The Rural Mirror ಸುದ್ದಿಜಾಲ
ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ
July 29, 2025
8:19 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group