Advertisement
ಸುದ್ದಿಗಳು

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

Share

ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾದ ಎಚ್.ಎಮ್.ಕೃಷ್ಣಕುಮಾರ್ ಅವರ ಅಧಿಕಾರ ಅವಧಿ ಕೊನೆಗೊಳ್ಳುವುದರಿಂದ,ಮೇ 1 ರಿಂದ ಅನ್ವಯವಾಗುವಂತೆ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿದೆ.

Advertisement
Advertisement

ಕಳೆದ 50 ವರ್ಷಗಳಿಂದ ರೈತರ ಹಿತರಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾಂಪ್ಕೊದ ಆಡಳಿತ  ಮಂಡಳಿಯು ಎ.23 ರಂದು ತನ್ನ ಮಂಡಳಿ ಸಭೆಯಲ್ಲಿ ಸಂಸ್ಥೆಯನ್ನು ಮುನ್ನಡೆಸುವ ಮಹತ್ತರ ಜವಾಬ್ದಾರಿಯನ್ನು ಡಾ.ಬಿ.ವಿ.ಸತ್ಯನಾರಾಯಣ ಅವರಿಗೆ ವಹಿಸುವ ನಿರ್ಣಯವನ್ನು ಅವಿರೋಧವಾಗಿ ತೆಗೆದುಕೊಂಡಿದೆ.

ಡಾ.ಸತ್ಯನಾರಾಯಣ ಅವರು ಈ ಮೊದಲು ಕೆ.ಎಮ್.ಎಫ್ ನ ಘಟಕವಾದ ಬೆಂಗಳೂರಿನ ಮದರ್ ಡೈರಿಯ ನಿರ್ದೇಶಕರಾಗಿ, ಕೆ.ಎಮ್.ಎಫ್ ನ ಜಂಟಿ ನಿರ್ದೇಶಕರಾಗಿ,ದ.ಕ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಐಡಿಯಲ್ ಐಸ್ ಕ್ರೀಮ್ ನ ಮಾರುಕಟ್ಟೆ ವಿಭಾಗದ ಉಪಾಧ್ಯಕ್ಷರಾಗಿ ಉದ್ಯಮ ಕ್ಷೇತ್ರದಲ್ಲಿ ಅಗಾಧ ಜ್ಞಾನವನ್ನು ಹೊಂದಿರುತ್ತಾರೆ.ಅವರನ್ನು ಜನವರಿ 2024 ರಿಂದ ಕ್ಯಾಂಪ್ಕೊದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಿಕೊಂಡಿತ್ತು.

ಸಂಸ್ಥೆಯ ಅಧ್ಯಕ್ಷರಾದ ಎ.ಕಿಶೋರ್ ಕುಮಾರ್ ಕೊಡ್ಗಿ ಮತ್ತು ಆಡಳಿತ ಮಂಡಳಿ,ನೂತನವಾಗಿ ಆಯ್ಕೆಯಾದ ವ್ಯವಸ್ಥಾಪಕ ನಿರ್ದೇಶಕರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದೆ. ಕ್ಯಾಂಪ್ಕೊಗೆ ಸಂಬಂಧಿಸಿದ ಎಲ್ಲಾ ವಿಷಯಗಳಿಗೆ ಡಾ. ಸತ್ಯನಾರಾಯಣ ಅವರನ್ನು ದೂರವಾಣಿ ಸಂಖ್ಯೆ 0824-2425866/2888220/2888218 ಹಾಗೂ ಇಮೇಲ್ ಐಡಿ md@campco.org ಮೂಲಕ ಸಂಪರ್ಕಿಸಲು ತನ್ನ ಸದಸ್ಯರನ್ನು ಕೊಡ್ಗಿಯವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

4 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

4 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

4 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

5 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

5 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

15 hours ago