ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾದ ಎಚ್.ಎಮ್.ಕೃಷ್ಣಕುಮಾರ್ ಅವರ ಅಧಿಕಾರ ಅವಧಿ ಕೊನೆಗೊಳ್ಳುವುದರಿಂದ,ಮೇ 1 ರಿಂದ ಅನ್ವಯವಾಗುವಂತೆ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿದೆ.
ಕಳೆದ 50 ವರ್ಷಗಳಿಂದ ರೈತರ ಹಿತರಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾಂಪ್ಕೊದ ಆಡಳಿತ ಮಂಡಳಿಯು ಎ.23 ರಂದು ತನ್ನ ಮಂಡಳಿ ಸಭೆಯಲ್ಲಿ ಸಂಸ್ಥೆಯನ್ನು ಮುನ್ನಡೆಸುವ ಮಹತ್ತರ ಜವಾಬ್ದಾರಿಯನ್ನು ಡಾ.ಬಿ.ವಿ.ಸತ್ಯನಾರಾಯಣ ಅವರಿಗೆ ವಹಿಸುವ ನಿರ್ಣಯವನ್ನು ಅವಿರೋಧವಾಗಿ ತೆಗೆದುಕೊಂಡಿದೆ.
ಡಾ.ಸತ್ಯನಾರಾಯಣ ಅವರು ಈ ಮೊದಲು ಕೆ.ಎಮ್.ಎಫ್ ನ ಘಟಕವಾದ ಬೆಂಗಳೂರಿನ ಮದರ್ ಡೈರಿಯ ನಿರ್ದೇಶಕರಾಗಿ, ಕೆ.ಎಮ್.ಎಫ್ ನ ಜಂಟಿ ನಿರ್ದೇಶಕರಾಗಿ,ದ.ಕ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಐಡಿಯಲ್ ಐಸ್ ಕ್ರೀಮ್ ನ ಮಾರುಕಟ್ಟೆ ವಿಭಾಗದ ಉಪಾಧ್ಯಕ್ಷರಾಗಿ ಉದ್ಯಮ ಕ್ಷೇತ್ರದಲ್ಲಿ ಅಗಾಧ ಜ್ಞಾನವನ್ನು ಹೊಂದಿರುತ್ತಾರೆ.ಅವರನ್ನು ಜನವರಿ 2024 ರಿಂದ ಕ್ಯಾಂಪ್ಕೊದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಿಕೊಂಡಿತ್ತು.
ಸಂಸ್ಥೆಯ ಅಧ್ಯಕ್ಷರಾದ ಎ.ಕಿಶೋರ್ ಕುಮಾರ್ ಕೊಡ್ಗಿ ಮತ್ತು ಆಡಳಿತ ಮಂಡಳಿ,ನೂತನವಾಗಿ ಆಯ್ಕೆಯಾದ ವ್ಯವಸ್ಥಾಪಕ ನಿರ್ದೇಶಕರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದೆ. ಕ್ಯಾಂಪ್ಕೊಗೆ ಸಂಬಂಧಿಸಿದ ಎಲ್ಲಾ ವಿಷಯಗಳಿಗೆ ಡಾ. ಸತ್ಯನಾರಾಯಣ ಅವರನ್ನು ದೂರವಾಣಿ ಸಂಖ್ಯೆ 0824-2425866/2888220/2888218 ಹಾಗೂ ಇಮೇಲ್ ಐಡಿ md@campco.org ಮೂಲಕ ಸಂಪರ್ಕಿಸಲು ತನ್ನ ಸದಸ್ಯರನ್ನು ಕೊಡ್ಗಿಯವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…
ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…
ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…
ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…
ಕಾಳುಮೆಣಸಿನ ಧಾರಣೆ ಏರಿಕೆಯಾಗಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ.
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ…