ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾದ ಎಚ್.ಎಮ್.ಕೃಷ್ಣಕುಮಾರ್ ಅವರ ಅಧಿಕಾರ ಅವಧಿ ಕೊನೆಗೊಳ್ಳುವುದರಿಂದ,ಮೇ 1 ರಿಂದ ಅನ್ವಯವಾಗುವಂತೆ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿದೆ.
ಕಳೆದ 50 ವರ್ಷಗಳಿಂದ ರೈತರ ಹಿತರಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾಂಪ್ಕೊದ ಆಡಳಿತ ಮಂಡಳಿಯು ಎ.23 ರಂದು ತನ್ನ ಮಂಡಳಿ ಸಭೆಯಲ್ಲಿ ಸಂಸ್ಥೆಯನ್ನು ಮುನ್ನಡೆಸುವ ಮಹತ್ತರ ಜವಾಬ್ದಾರಿಯನ್ನು ಡಾ.ಬಿ.ವಿ.ಸತ್ಯನಾರಾಯಣ ಅವರಿಗೆ ವಹಿಸುವ ನಿರ್ಣಯವನ್ನು ಅವಿರೋಧವಾಗಿ ತೆಗೆದುಕೊಂಡಿದೆ.
ಡಾ.ಸತ್ಯನಾರಾಯಣ ಅವರು ಈ ಮೊದಲು ಕೆ.ಎಮ್.ಎಫ್ ನ ಘಟಕವಾದ ಬೆಂಗಳೂರಿನ ಮದರ್ ಡೈರಿಯ ನಿರ್ದೇಶಕರಾಗಿ, ಕೆ.ಎಮ್.ಎಫ್ ನ ಜಂಟಿ ನಿರ್ದೇಶಕರಾಗಿ,ದ.ಕ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಐಡಿಯಲ್ ಐಸ್ ಕ್ರೀಮ್ ನ ಮಾರುಕಟ್ಟೆ ವಿಭಾಗದ ಉಪಾಧ್ಯಕ್ಷರಾಗಿ ಉದ್ಯಮ ಕ್ಷೇತ್ರದಲ್ಲಿ ಅಗಾಧ ಜ್ಞಾನವನ್ನು ಹೊಂದಿರುತ್ತಾರೆ.ಅವರನ್ನು ಜನವರಿ 2024 ರಿಂದ ಕ್ಯಾಂಪ್ಕೊದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಿಕೊಂಡಿತ್ತು.
ಸಂಸ್ಥೆಯ ಅಧ್ಯಕ್ಷರಾದ ಎ.ಕಿಶೋರ್ ಕುಮಾರ್ ಕೊಡ್ಗಿ ಮತ್ತು ಆಡಳಿತ ಮಂಡಳಿ,ನೂತನವಾಗಿ ಆಯ್ಕೆಯಾದ ವ್ಯವಸ್ಥಾಪಕ ನಿರ್ದೇಶಕರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದೆ. ಕ್ಯಾಂಪ್ಕೊಗೆ ಸಂಬಂಧಿಸಿದ ಎಲ್ಲಾ ವಿಷಯಗಳಿಗೆ ಡಾ. ಸತ್ಯನಾರಾಯಣ ಅವರನ್ನು ದೂರವಾಣಿ ಸಂಖ್ಯೆ 0824-2425866/2888220/2888218 ಹಾಗೂ ಇಮೇಲ್ ಐಡಿ md@campco.org ಮೂಲಕ ಸಂಪರ್ಕಿಸಲು ತನ್ನ ಸದಸ್ಯರನ್ನು ಕೊಡ್ಗಿಯವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…