ದಿನದಿಂದ ದಿನಕ್ಕೆ ಜಗತ್ತಿನ ಆನೇಕ ದೇಶಗಳು ಆರ್ಥಿಕ ಹಿಂಜರಿತಕ್ಕೆ ಸಿಕ್ಕಿ ಜರ್ಜರಿತವಾಗುತ್ತಿವೆ. ಇದೀಗ ಯುರೋಪ್ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ತುತ್ತಾಗಬಹುದು ಎಂಬ ವರದಿಗಳು ಪ್ರಕಟವಾಗುತ್ತಿದ್ದಂತೆ ಸೌದಿ ಅರೇಬಿಯಾ ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಮುಂದಾಗಿದೆ.
ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ ಒಪೆಕ್ ವಿಯೆನ್ನಾದಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ 7 ಗಂಟೆಗಳ ಕಾಲ ಸಭೆ ನಡೆಸಿ ತೈಲ ಬೆಲೆ ಹೆಚ್ಚಿಸುವ ಸಲುವಾಗಿ ಉತ್ಪಾದನೆಯನ್ನು ಕಡಿತಗೊಳಿಸಲು ನಿರ್ಧರಿಸಿದೆ. ಇದರ ಪ್ರಕಾರ ದಿನಕ್ಕೆ 14 ಲಕ್ಷ ಬ್ಯಾರೆಲ್ಗಳಷ್ಟು ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಯೋಜಿಸಿದೆ.
ತೈಲ ಉತ್ಪಾದನೆ ಕಡಿತವನ್ನು ಜುಲೈ ನಂತರ ಪ್ರಾರಂಭಿಸಬಹುದು ಎಂದು ಸೌದಿ ತಿಳಿಸಿದೆ. ಆದರೆ ಇದು ರಷ್ಯಾ, ನೈಜೀರಿಯಾ ಹಾಗೂ ಅಂಗೋಲಾದ ಪ್ರಸ್ತುತ ಉತ್ಪಾದನಾ ಮಟ್ಟಕ್ಕೆ ಅನುಗುಣವಾಗಿ ತರಲು ಸಾಧ್ಯವಿಲ್ಲ. ಒಪೆಕ್ ಪ್ರಪಂಚದಲ್ಲಿ 40% ರಷ್ಟು ಕಚ್ಚಾತೈಲ ಉತ್ಪಾದನೆಯ ಪಾಲನ್ನು ಹೊಂದಿದೆ. ಆದರೆ ಅದು ತೆಗೆದುಕೊಳ್ಳುವ ನೀತಿ ನಿರ್ಧಾರಗಳು ಜಾಗತಿಕವಾಗಿ ತೈಲ ಬೆಲೆಗಳ ಮೇಲೆ ಪ್ರಮುಖ ಪರಿಣಾಮ ಬೀರುವ ಸಾಧ್ಯತೆಯಿದೆ.ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಮತ್ತಷ್ಟು ದುಬಾರಿಯಾಗುವ ಎಲ್ಲಾ ಲಕ್ಷಣಗಳು ಕಂಡಬರುತ್ತಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…