Advertisement
ಸುದ್ದಿಗಳು

ಯುರೋಪ್ ರಾಷ್ಟ್ರಗಳ ಆರ್ಥಿಕ ಹಿಂಜರಿತ | ಕಚ್ಚಾ ತೈಲ ಉತ್ಪಾದನೆ ಕಡಿತ | ತೈಲ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

Share

ದಿನದಿಂದ ದಿನಕ್ಕೆ ಜಗತ್ತಿನ ಆನೇಕ ದೇಶಗಳು ಆರ್ಥಿಕ ಹಿಂಜರಿತಕ್ಕೆ ಸಿಕ್ಕಿ ಜರ್ಜರಿತವಾಗುತ್ತಿವೆ.  ಇದೀಗ ಯುರೋಪ್ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ತುತ್ತಾಗಬಹುದು ಎಂಬ ವರದಿಗಳು ಪ್ರಕಟವಾಗುತ್ತಿದ್ದಂತೆ ಸೌದಿ ಅರೇಬಿಯಾ  ಕಚ್ಚಾ ತೈಲ  ಉತ್ಪಾದನೆಯನ್ನು ಕಡಿತಗೊಳಿಸಲು ಮುಂದಾಗಿದೆ.

Advertisement
Advertisement
ಜುಲೈನಿಂದ ಪ್ರತಿದಿನ 10 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ತಿಳಿಸಿದೆ. ಈ ಹಿಂದೆ ಒಪೆಕ್ (OPEC) ಸದಸ್ಯ ರಾಷ್ಟ್ರಗಳು ತೈಲ ಉತ್ಪಾದನೆಯನ್ನು ಕಡಿತ ಮಾಡಿ ಬೆಲೆಯನ್ನು ಹೆಚ್ಚಿಸಲು ಪ್ರಯತ್ನಿಸಿದ್ದವು. ಆದರೆ ಬೆಲೆ ಹೆಚ್ಚಳ ಸಾಧ್ಯವಾಗದಿರುವ ಕಾರಣ ಉತ್ಪಾದನೆಯನ್ನು ಮತ್ತಷ್ಟು ಕಡಿತಗೊಳಿಸಲು ಸೌದಿ ಅರೇಬಿಯಾ ನಿರ್ಧಾರ ತೆಗೆದುಕೊಂಡಿದೆ.

 

Advertisement

ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ ಒಪೆಕ್ ವಿಯೆನ್ನಾದಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ 7 ಗಂಟೆಗಳ ಕಾಲ ಸಭೆ ನಡೆಸಿ ತೈಲ ಬೆಲೆ ಹೆಚ್ಚಿಸುವ ಸಲುವಾಗಿ ಉತ್ಪಾದನೆಯನ್ನು ಕಡಿತಗೊಳಿಸಲು ನಿರ್ಧರಿಸಿದೆ. ಇದರ ಪ್ರಕಾರ ದಿನಕ್ಕೆ 14 ಲಕ್ಷ ಬ್ಯಾರೆಲ್‌ಗಳಷ್ಟು ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಯೋಜಿಸಿದೆ.

ತೈಲ ಉತ್ಪಾದನೆ ಕಡಿತವನ್ನು ಜುಲೈ ನಂತರ ಪ್ರಾರಂಭಿಸಬಹುದು ಎಂದು ಸೌದಿ ತಿಳಿಸಿದೆ. ಆದರೆ ಇದು ರಷ್ಯಾ, ನೈಜೀರಿಯಾ ಹಾಗೂ ಅಂಗೋಲಾದ ಪ್ರಸ್ತುತ ಉತ್ಪಾದನಾ ಮಟ್ಟಕ್ಕೆ ಅನುಗುಣವಾಗಿ ತರಲು ಸಾಧ್ಯವಿಲ್ಲ. ಒಪೆಕ್ ಪ್ರಪಂಚದಲ್ಲಿ 40% ರಷ್ಟು ಕಚ್ಚಾತೈಲ ಉತ್ಪಾದನೆಯ ಪಾಲನ್ನು ಹೊಂದಿದೆ. ಆದರೆ ಅದು ತೆಗೆದುಕೊಳ್ಳುವ ನೀತಿ ನಿರ್ಧಾರಗಳು ಜಾಗತಿಕವಾಗಿ ತೈಲ ಬೆಲೆಗಳ ಮೇಲೆ ಪ್ರಮುಖ ಪರಿಣಾಮ ಬೀರುವ ಸಾಧ್ಯತೆಯಿದೆ.ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಮತ್ತಷ್ಟು ದುಬಾರಿಯಾಗುವ ಎಲ್ಲಾ ಲಕ್ಷಣಗಳು ಕಂಡಬರುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

7 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

8 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

9 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

9 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

9 hours ago