ಸುದ್ದಿಗಳು

ಯುರೋಪ್ ರಾಷ್ಟ್ರಗಳ ಆರ್ಥಿಕ ಹಿಂಜರಿತ | ಕಚ್ಚಾ ತೈಲ ಉತ್ಪಾದನೆ ಕಡಿತ | ತೈಲ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಿನದಿಂದ ದಿನಕ್ಕೆ ಜಗತ್ತಿನ ಆನೇಕ ದೇಶಗಳು ಆರ್ಥಿಕ ಹಿಂಜರಿತಕ್ಕೆ ಸಿಕ್ಕಿ ಜರ್ಜರಿತವಾಗುತ್ತಿವೆ.  ಇದೀಗ ಯುರೋಪ್ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ತುತ್ತಾಗಬಹುದು ಎಂಬ ವರದಿಗಳು ಪ್ರಕಟವಾಗುತ್ತಿದ್ದಂತೆ ಸೌದಿ ಅರೇಬಿಯಾ  ಕಚ್ಚಾ ತೈಲ  ಉತ್ಪಾದನೆಯನ್ನು ಕಡಿತಗೊಳಿಸಲು ಮುಂದಾಗಿದೆ.

Advertisement
ಜುಲೈನಿಂದ ಪ್ರತಿದಿನ 10 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ತಿಳಿಸಿದೆ. ಈ ಹಿಂದೆ ಒಪೆಕ್ (OPEC) ಸದಸ್ಯ ರಾಷ್ಟ್ರಗಳು ತೈಲ ಉತ್ಪಾದನೆಯನ್ನು ಕಡಿತ ಮಾಡಿ ಬೆಲೆಯನ್ನು ಹೆಚ್ಚಿಸಲು ಪ್ರಯತ್ನಿಸಿದ್ದವು. ಆದರೆ ಬೆಲೆ ಹೆಚ್ಚಳ ಸಾಧ್ಯವಾಗದಿರುವ ಕಾರಣ ಉತ್ಪಾದನೆಯನ್ನು ಮತ್ತಷ್ಟು ಕಡಿತಗೊಳಿಸಲು ಸೌದಿ ಅರೇಬಿಯಾ ನಿರ್ಧಾರ ತೆಗೆದುಕೊಂಡಿದೆ.

 

ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ ಒಪೆಕ್ ವಿಯೆನ್ನಾದಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ 7 ಗಂಟೆಗಳ ಕಾಲ ಸಭೆ ನಡೆಸಿ ತೈಲ ಬೆಲೆ ಹೆಚ್ಚಿಸುವ ಸಲುವಾಗಿ ಉತ್ಪಾದನೆಯನ್ನು ಕಡಿತಗೊಳಿಸಲು ನಿರ್ಧರಿಸಿದೆ. ಇದರ ಪ್ರಕಾರ ದಿನಕ್ಕೆ 14 ಲಕ್ಷ ಬ್ಯಾರೆಲ್‌ಗಳಷ್ಟು ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಯೋಜಿಸಿದೆ.

ತೈಲ ಉತ್ಪಾದನೆ ಕಡಿತವನ್ನು ಜುಲೈ ನಂತರ ಪ್ರಾರಂಭಿಸಬಹುದು ಎಂದು ಸೌದಿ ತಿಳಿಸಿದೆ. ಆದರೆ ಇದು ರಷ್ಯಾ, ನೈಜೀರಿಯಾ ಹಾಗೂ ಅಂಗೋಲಾದ ಪ್ರಸ್ತುತ ಉತ್ಪಾದನಾ ಮಟ್ಟಕ್ಕೆ ಅನುಗುಣವಾಗಿ ತರಲು ಸಾಧ್ಯವಿಲ್ಲ. ಒಪೆಕ್ ಪ್ರಪಂಚದಲ್ಲಿ 40% ರಷ್ಟು ಕಚ್ಚಾತೈಲ ಉತ್ಪಾದನೆಯ ಪಾಲನ್ನು ಹೊಂದಿದೆ. ಆದರೆ ಅದು ತೆಗೆದುಕೊಳ್ಳುವ ನೀತಿ ನಿರ್ಧಾರಗಳು ಜಾಗತಿಕವಾಗಿ ತೈಲ ಬೆಲೆಗಳ ಮೇಲೆ ಪ್ರಮುಖ ಪರಿಣಾಮ ಬೀರುವ ಸಾಧ್ಯತೆಯಿದೆ.ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಮತ್ತಷ್ಟು ದುಬಾರಿಯಾಗುವ ಎಲ್ಲಾ ಲಕ್ಷಣಗಳು ಕಂಡಬರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

4 minutes ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

19 minutes ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

7 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

14 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

14 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

14 hours ago