Advertisement
ಸುದ್ದಿಗಳು

ಯುರೋಪ್ ರಾಷ್ಟ್ರಗಳ ಆರ್ಥಿಕ ಹಿಂಜರಿತ | ಕಚ್ಚಾ ತೈಲ ಉತ್ಪಾದನೆ ಕಡಿತ | ತೈಲ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

Share

ದಿನದಿಂದ ದಿನಕ್ಕೆ ಜಗತ್ತಿನ ಆನೇಕ ದೇಶಗಳು ಆರ್ಥಿಕ ಹಿಂಜರಿತಕ್ಕೆ ಸಿಕ್ಕಿ ಜರ್ಜರಿತವಾಗುತ್ತಿವೆ.  ಇದೀಗ ಯುರೋಪ್ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ತುತ್ತಾಗಬಹುದು ಎಂಬ ವರದಿಗಳು ಪ್ರಕಟವಾಗುತ್ತಿದ್ದಂತೆ ಸೌದಿ ಅರೇಬಿಯಾ  ಕಚ್ಚಾ ತೈಲ  ಉತ್ಪಾದನೆಯನ್ನು ಕಡಿತಗೊಳಿಸಲು ಮುಂದಾಗಿದೆ.

ಜುಲೈನಿಂದ ಪ್ರತಿದಿನ 10 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ತಿಳಿಸಿದೆ. ಈ ಹಿಂದೆ ಒಪೆಕ್ (OPEC) ಸದಸ್ಯ ರಾಷ್ಟ್ರಗಳು ತೈಲ ಉತ್ಪಾದನೆಯನ್ನು ಕಡಿತ ಮಾಡಿ ಬೆಲೆಯನ್ನು ಹೆಚ್ಚಿಸಲು ಪ್ರಯತ್ನಿಸಿದ್ದವು. ಆದರೆ ಬೆಲೆ ಹೆಚ್ಚಳ ಸಾಧ್ಯವಾಗದಿರುವ ಕಾರಣ ಉತ್ಪಾದನೆಯನ್ನು ಮತ್ತಷ್ಟು ಕಡಿತಗೊಳಿಸಲು ಸೌದಿ ಅರೇಬಿಯಾ ನಿರ್ಧಾರ ತೆಗೆದುಕೊಂಡಿದೆ.

 

ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ ಒಪೆಕ್ ವಿಯೆನ್ನಾದಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ 7 ಗಂಟೆಗಳ ಕಾಲ ಸಭೆ ನಡೆಸಿ ತೈಲ ಬೆಲೆ ಹೆಚ್ಚಿಸುವ ಸಲುವಾಗಿ ಉತ್ಪಾದನೆಯನ್ನು ಕಡಿತಗೊಳಿಸಲು ನಿರ್ಧರಿಸಿದೆ. ಇದರ ಪ್ರಕಾರ ದಿನಕ್ಕೆ 14 ಲಕ್ಷ ಬ್ಯಾರೆಲ್‌ಗಳಷ್ಟು ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಯೋಜಿಸಿದೆ.

ತೈಲ ಉತ್ಪಾದನೆ ಕಡಿತವನ್ನು ಜುಲೈ ನಂತರ ಪ್ರಾರಂಭಿಸಬಹುದು ಎಂದು ಸೌದಿ ತಿಳಿಸಿದೆ. ಆದರೆ ಇದು ರಷ್ಯಾ, ನೈಜೀರಿಯಾ ಹಾಗೂ ಅಂಗೋಲಾದ ಪ್ರಸ್ತುತ ಉತ್ಪಾದನಾ ಮಟ್ಟಕ್ಕೆ ಅನುಗುಣವಾಗಿ ತರಲು ಸಾಧ್ಯವಿಲ್ಲ. ಒಪೆಕ್ ಪ್ರಪಂಚದಲ್ಲಿ 40% ರಷ್ಟು ಕಚ್ಚಾತೈಲ ಉತ್ಪಾದನೆಯ ಪಾಲನ್ನು ಹೊಂದಿದೆ. ಆದರೆ ಅದು ತೆಗೆದುಕೊಳ್ಳುವ ನೀತಿ ನಿರ್ಧಾರಗಳು ಜಾಗತಿಕವಾಗಿ ತೈಲ ಬೆಲೆಗಳ ಮೇಲೆ ಪ್ರಮುಖ ಪರಿಣಾಮ ಬೀರುವ ಸಾಧ್ಯತೆಯಿದೆ.ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಮತ್ತಷ್ಟು ದುಬಾರಿಯಾಗುವ ಎಲ್ಲಾ ಲಕ್ಷಣಗಳು ಕಂಡಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

17 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

18 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

18 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago