ಮಾ.6ರಿಂದ ಸೌಗಂಧಿಕದಲ್ಲಿ “ವರ್ಣ ಸಂಕ್ರಮಣ ಕಲಾ ಪ್ರದರ್ಶನ”

March 3, 2022
11:10 PM

ಪುತ್ತೂರು ತಾಲೂಕಿನ ಪರ್ಪುಂಜದ ಸೌಗಂಧಿಕದಲ್ಲಿ ಮಾರ್ಚ್  6 ರಂದು ‘ವರ್ಣ ಸಂಕ್ರಮಣ’ ಚಿತ್ರ ಕಲಾವಿದೆಯರ ಕಲಾ ಪ್ರದರ್ಶನ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ 21 ಮಹಿಳಾ ಕಲಾವಿದರ ಕಲಾರಚನೆಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ.

ಸಂಜೆ 5 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಳಿನಿ ಕಜೆ, ಉಷಾ ರಮೇಶ್ ರಾವ್ ಹಾಗೂ ಪದ್ಮಾ ಕೆ. ಆರ್. ಆಚಾರ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹೆಸರಾಂತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಹಾಗೂ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಂಗೀತ ಶ್ರದ್ಧಾಂಜಲಿ ಪಡಿಸಲಾಗುವುದು. ಜತೆಗೆ ಪುತ್ತೂರಿನ ’ಧೀ ಶಕ್ತಿ ಮಹಿಳಾ ಯಕ್ಷ ಬಳಗ’ದಿಂದ ‘ಸಮರ ಸೌಗಂಧಿಕ’ ಯಕ್ಷಗಾನ ತಾಳಮದ್ದಳೆ ಜರುಗಲಿದೆ.

ಕಲಾ ಪ್ರದರ್ಶನ ಮಾ.13 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6ರ ತನ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ. ಕಲಾವಿದರಾದ ನಳಿನಿ ಕಜೆ, ವೀಣಾ ಶ್ರೀನಿವಾಸ್, ಸಪ್ನಾ ನೊರೋನ್ಹ, ಅದಿತಿ ಎಂ. ಎಸ್., ವರ್ಷಾ ಮೊಳೆಯಾರ್, ವಸಂತಿ ಸಾಮೆತಡ್ಕ, ಖುರ್ಷಿದ್ ವೈ., ವೀಣಾ ಮಧುಸೂಧನ್, ರಚನಾ ಸೂರಜ್, ಗಾಯತ್ರಿ ನಾಯಕ್, ಝೀನಾ ಕೊಲಾಸೊ, ಜಯಶ್ರೀ, ಜ್ಯೋತಿ ಶೆಟ್ಟಿ, ಆತ್ಮೀ ರೈ, ಸಹಮತ ಬೊಳುವಾರು, ಪೃಥ್ವೀ ಸೌಗಂಧಿಕ, ಸುಮನಾ ಟಿ. ಆರ್., ಗೀತಾಂಜಲಿ, ಸಂಹಿತಾ ಶರ್ಮ, ರೇಷ್ಮಾ ಶೆಟ್ಟಿ ಹಾಗೂ ಗೀತಾ ವಸಂತ ನಾಯಕ್ ಅವರ ಕಲಾ ರಚನೆಗಳು ಪ್ರದರ್ಶನಗೊಳ್ಳಲಿವೆ ಎಂದು ಚಂದ್ರ ಸೌಗಂಧಿಕ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror