Advertisement
ಸುದ್ದಿಗಳು

ಮಾ.6ರಿಂದ ಸೌಗಂಧಿಕದಲ್ಲಿ “ವರ್ಣ ಸಂಕ್ರಮಣ ಕಲಾ ಪ್ರದರ್ಶನ”

Share

ಪುತ್ತೂರು ತಾಲೂಕಿನ ಪರ್ಪುಂಜದ ಸೌಗಂಧಿಕದಲ್ಲಿ ಮಾರ್ಚ್  6 ರಂದು ‘ವರ್ಣ ಸಂಕ್ರಮಣ’ ಚಿತ್ರ ಕಲಾವಿದೆಯರ ಕಲಾ ಪ್ರದರ್ಶನ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ 21 ಮಹಿಳಾ ಕಲಾವಿದರ ಕಲಾರಚನೆಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ.

ಸಂಜೆ 5 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಳಿನಿ ಕಜೆ, ಉಷಾ ರಮೇಶ್ ರಾವ್ ಹಾಗೂ ಪದ್ಮಾ ಕೆ. ಆರ್. ಆಚಾರ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹೆಸರಾಂತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಹಾಗೂ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಂಗೀತ ಶ್ರದ್ಧಾಂಜಲಿ ಪಡಿಸಲಾಗುವುದು. ಜತೆಗೆ ಪುತ್ತೂರಿನ ’ಧೀ ಶಕ್ತಿ ಮಹಿಳಾ ಯಕ್ಷ ಬಳಗ’ದಿಂದ ‘ಸಮರ ಸೌಗಂಧಿಕ’ ಯಕ್ಷಗಾನ ತಾಳಮದ್ದಳೆ ಜರುಗಲಿದೆ.

ಕಲಾ ಪ್ರದರ್ಶನ ಮಾ.13 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6ರ ತನ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ. ಕಲಾವಿದರಾದ ನಳಿನಿ ಕಜೆ, ವೀಣಾ ಶ್ರೀನಿವಾಸ್, ಸಪ್ನಾ ನೊರೋನ್ಹ, ಅದಿತಿ ಎಂ. ಎಸ್., ವರ್ಷಾ ಮೊಳೆಯಾರ್, ವಸಂತಿ ಸಾಮೆತಡ್ಕ, ಖುರ್ಷಿದ್ ವೈ., ವೀಣಾ ಮಧುಸೂಧನ್, ರಚನಾ ಸೂರಜ್, ಗಾಯತ್ರಿ ನಾಯಕ್, ಝೀನಾ ಕೊಲಾಸೊ, ಜಯಶ್ರೀ, ಜ್ಯೋತಿ ಶೆಟ್ಟಿ, ಆತ್ಮೀ ರೈ, ಸಹಮತ ಬೊಳುವಾರು, ಪೃಥ್ವೀ ಸೌಗಂಧಿಕ, ಸುಮನಾ ಟಿ. ಆರ್., ಗೀತಾಂಜಲಿ, ಸಂಹಿತಾ ಶರ್ಮ, ರೇಷ್ಮಾ ಶೆಟ್ಟಿ ಹಾಗೂ ಗೀತಾ ವಸಂತ ನಾಯಕ್ ಅವರ ಕಲಾ ರಚನೆಗಳು ಪ್ರದರ್ಶನಗೊಳ್ಳಲಿವೆ ಎಂದು ಚಂದ್ರ ಸೌಗಂಧಿಕ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

28 minutes ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago