Advertisement
ಸುದ್ದಿಗಳು

ಮಾ.6ರಿಂದ ಸೌಗಂಧಿಕದಲ್ಲಿ “ವರ್ಣ ಸಂಕ್ರಮಣ ಕಲಾ ಪ್ರದರ್ಶನ”

Share

ಪುತ್ತೂರು ತಾಲೂಕಿನ ಪರ್ಪುಂಜದ ಸೌಗಂಧಿಕದಲ್ಲಿ ಮಾರ್ಚ್  6 ರಂದು ‘ವರ್ಣ ಸಂಕ್ರಮಣ’ ಚಿತ್ರ ಕಲಾವಿದೆಯರ ಕಲಾ ಪ್ರದರ್ಶನ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ 21 ಮಹಿಳಾ ಕಲಾವಿದರ ಕಲಾರಚನೆಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ.

ಸಂಜೆ 5 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಳಿನಿ ಕಜೆ, ಉಷಾ ರಮೇಶ್ ರಾವ್ ಹಾಗೂ ಪದ್ಮಾ ಕೆ. ಆರ್. ಆಚಾರ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹೆಸರಾಂತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಹಾಗೂ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಂಗೀತ ಶ್ರದ್ಧಾಂಜಲಿ ಪಡಿಸಲಾಗುವುದು. ಜತೆಗೆ ಪುತ್ತೂರಿನ ’ಧೀ ಶಕ್ತಿ ಮಹಿಳಾ ಯಕ್ಷ ಬಳಗ’ದಿಂದ ‘ಸಮರ ಸೌಗಂಧಿಕ’ ಯಕ್ಷಗಾನ ತಾಳಮದ್ದಳೆ ಜರುಗಲಿದೆ.

ಕಲಾ ಪ್ರದರ್ಶನ ಮಾ.13 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6ರ ತನ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ. ಕಲಾವಿದರಾದ ನಳಿನಿ ಕಜೆ, ವೀಣಾ ಶ್ರೀನಿವಾಸ್, ಸಪ್ನಾ ನೊರೋನ್ಹ, ಅದಿತಿ ಎಂ. ಎಸ್., ವರ್ಷಾ ಮೊಳೆಯಾರ್, ವಸಂತಿ ಸಾಮೆತಡ್ಕ, ಖುರ್ಷಿದ್ ವೈ., ವೀಣಾ ಮಧುಸೂಧನ್, ರಚನಾ ಸೂರಜ್, ಗಾಯತ್ರಿ ನಾಯಕ್, ಝೀನಾ ಕೊಲಾಸೊ, ಜಯಶ್ರೀ, ಜ್ಯೋತಿ ಶೆಟ್ಟಿ, ಆತ್ಮೀ ರೈ, ಸಹಮತ ಬೊಳುವಾರು, ಪೃಥ್ವೀ ಸೌಗಂಧಿಕ, ಸುಮನಾ ಟಿ. ಆರ್., ಗೀತಾಂಜಲಿ, ಸಂಹಿತಾ ಶರ್ಮ, ರೇಷ್ಮಾ ಶೆಟ್ಟಿ ಹಾಗೂ ಗೀತಾ ವಸಂತ ನಾಯಕ್ ಅವರ ಕಲಾ ರಚನೆಗಳು ಪ್ರದರ್ಶನಗೊಳ್ಳಲಿವೆ ಎಂದು ಚಂದ್ರ ಸೌಗಂಧಿಕ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

8 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

10 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

19 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

19 hours ago