ಪುತ್ತೂರು ತಾಲೂಕಿನ ಪರ್ಪುಂಜದ ಸೌಗಂಧಿಕದಲ್ಲಿ ಮಾರ್ಚ್ 6 ರಂದು ‘ವರ್ಣ ಸಂಕ್ರಮಣ’ ಚಿತ್ರ ಕಲಾವಿದೆಯರ ಕಲಾ ಪ್ರದರ್ಶನ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ 21 ಮಹಿಳಾ ಕಲಾವಿದರ ಕಲಾರಚನೆಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ.
ಸಂಜೆ 5 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಳಿನಿ ಕಜೆ, ಉಷಾ ರಮೇಶ್ ರಾವ್ ಹಾಗೂ ಪದ್ಮಾ ಕೆ. ಆರ್. ಆಚಾರ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹೆಸರಾಂತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಹಾಗೂ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಂಗೀತ ಶ್ರದ್ಧಾಂಜಲಿ ಪಡಿಸಲಾಗುವುದು. ಜತೆಗೆ ಪುತ್ತೂರಿನ ’ಧೀ ಶಕ್ತಿ ಮಹಿಳಾ ಯಕ್ಷ ಬಳಗ’ದಿಂದ ‘ಸಮರ ಸೌಗಂಧಿಕ’ ಯಕ್ಷಗಾನ ತಾಳಮದ್ದಳೆ ಜರುಗಲಿದೆ.
ಕಲಾ ಪ್ರದರ್ಶನ ಮಾ.13 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6ರ ತನ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ. ಕಲಾವಿದರಾದ ನಳಿನಿ ಕಜೆ, ವೀಣಾ ಶ್ರೀನಿವಾಸ್, ಸಪ್ನಾ ನೊರೋನ್ಹ, ಅದಿತಿ ಎಂ. ಎಸ್., ವರ್ಷಾ ಮೊಳೆಯಾರ್, ವಸಂತಿ ಸಾಮೆತಡ್ಕ, ಖುರ್ಷಿದ್ ವೈ., ವೀಣಾ ಮಧುಸೂಧನ್, ರಚನಾ ಸೂರಜ್, ಗಾಯತ್ರಿ ನಾಯಕ್, ಝೀನಾ ಕೊಲಾಸೊ, ಜಯಶ್ರೀ, ಜ್ಯೋತಿ ಶೆಟ್ಟಿ, ಆತ್ಮೀ ರೈ, ಸಹಮತ ಬೊಳುವಾರು, ಪೃಥ್ವೀ ಸೌಗಂಧಿಕ, ಸುಮನಾ ಟಿ. ಆರ್., ಗೀತಾಂಜಲಿ, ಸಂಹಿತಾ ಶರ್ಮ, ರೇಷ್ಮಾ ಶೆಟ್ಟಿ ಹಾಗೂ ಗೀತಾ ವಸಂತ ನಾಯಕ್ ಅವರ ಕಲಾ ರಚನೆಗಳು ಪ್ರದರ್ಶನಗೊಳ್ಳಲಿವೆ ಎಂದು ಚಂದ್ರ ಸೌಗಂಧಿಕ ತಿಳಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…