ಪುತ್ತೂರು ತಾಲೂಕಿನ ಪರ್ಪುಂಜದ ಸೌಗಂಧಿಕದಲ್ಲಿ ಮಾರ್ಚ್ 6 ರಂದು ‘ವರ್ಣ ಸಂಕ್ರಮಣ’ ಚಿತ್ರ ಕಲಾವಿದೆಯರ ಕಲಾ ಪ್ರದರ್ಶನ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ 21 ಮಹಿಳಾ ಕಲಾವಿದರ ಕಲಾರಚನೆಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ.
ಸಂಜೆ 5 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಳಿನಿ ಕಜೆ, ಉಷಾ ರಮೇಶ್ ರಾವ್ ಹಾಗೂ ಪದ್ಮಾ ಕೆ. ಆರ್. ಆಚಾರ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹೆಸರಾಂತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಹಾಗೂ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಂಗೀತ ಶ್ರದ್ಧಾಂಜಲಿ ಪಡಿಸಲಾಗುವುದು. ಜತೆಗೆ ಪುತ್ತೂರಿನ ’ಧೀ ಶಕ್ತಿ ಮಹಿಳಾ ಯಕ್ಷ ಬಳಗ’ದಿಂದ ‘ಸಮರ ಸೌಗಂಧಿಕ’ ಯಕ್ಷಗಾನ ತಾಳಮದ್ದಳೆ ಜರುಗಲಿದೆ.
ಕಲಾ ಪ್ರದರ್ಶನ ಮಾ.13 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6ರ ತನ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ. ಕಲಾವಿದರಾದ ನಳಿನಿ ಕಜೆ, ವೀಣಾ ಶ್ರೀನಿವಾಸ್, ಸಪ್ನಾ ನೊರೋನ್ಹ, ಅದಿತಿ ಎಂ. ಎಸ್., ವರ್ಷಾ ಮೊಳೆಯಾರ್, ವಸಂತಿ ಸಾಮೆತಡ್ಕ, ಖುರ್ಷಿದ್ ವೈ., ವೀಣಾ ಮಧುಸೂಧನ್, ರಚನಾ ಸೂರಜ್, ಗಾಯತ್ರಿ ನಾಯಕ್, ಝೀನಾ ಕೊಲಾಸೊ, ಜಯಶ್ರೀ, ಜ್ಯೋತಿ ಶೆಟ್ಟಿ, ಆತ್ಮೀ ರೈ, ಸಹಮತ ಬೊಳುವಾರು, ಪೃಥ್ವೀ ಸೌಗಂಧಿಕ, ಸುಮನಾ ಟಿ. ಆರ್., ಗೀತಾಂಜಲಿ, ಸಂಹಿತಾ ಶರ್ಮ, ರೇಷ್ಮಾ ಶೆಟ್ಟಿ ಹಾಗೂ ಗೀತಾ ವಸಂತ ನಾಯಕ್ ಅವರ ಕಲಾ ರಚನೆಗಳು ಪ್ರದರ್ಶನಗೊಳ್ಳಲಿವೆ ಎಂದು ಚಂದ್ರ ಸೌಗಂಧಿಕ ತಿಳಿಸಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…