ಪುತ್ತೂರು ತಾಲೂಕಿನ ಪರ್ಪುಂಜದ ಸೌಗಂಧಿಕದಲ್ಲಿ ಮಾರ್ಚ್ 6 ರಂದು ‘ವರ್ಣ ಸಂಕ್ರಮಣ’ ಚಿತ್ರ ಕಲಾವಿದೆಯರ ಕಲಾ ಪ್ರದರ್ಶನ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ 21 ಮಹಿಳಾ ಕಲಾವಿದರ ಕಲಾರಚನೆಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ.
ಸಂಜೆ 5 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಳಿನಿ ಕಜೆ, ಉಷಾ ರಮೇಶ್ ರಾವ್ ಹಾಗೂ ಪದ್ಮಾ ಕೆ. ಆರ್. ಆಚಾರ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹೆಸರಾಂತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಹಾಗೂ ಹಿರಿಯ ಕವಿ ಚೆನ್ನವೀರ ಕಣವಿ ಅವರಿಗೆ ಸಂಗೀತ ಶ್ರದ್ಧಾಂಜಲಿ ಪಡಿಸಲಾಗುವುದು. ಜತೆಗೆ ಪುತ್ತೂರಿನ ’ಧೀ ಶಕ್ತಿ ಮಹಿಳಾ ಯಕ್ಷ ಬಳಗ’ದಿಂದ ‘ಸಮರ ಸೌಗಂಧಿಕ’ ಯಕ್ಷಗಾನ ತಾಳಮದ್ದಳೆ ಜರುಗಲಿದೆ.
ಕಲಾ ಪ್ರದರ್ಶನ ಮಾ.13 ರ ವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 6ರ ತನ ಸಾರ್ವಜನಿಕ ವೀಕ್ಷಣೆಗೆ ತೆರೆದಿರುತ್ತದೆ. ಕಲಾವಿದರಾದ ನಳಿನಿ ಕಜೆ, ವೀಣಾ ಶ್ರೀನಿವಾಸ್, ಸಪ್ನಾ ನೊರೋನ್ಹ, ಅದಿತಿ ಎಂ. ಎಸ್., ವರ್ಷಾ ಮೊಳೆಯಾರ್, ವಸಂತಿ ಸಾಮೆತಡ್ಕ, ಖುರ್ಷಿದ್ ವೈ., ವೀಣಾ ಮಧುಸೂಧನ್, ರಚನಾ ಸೂರಜ್, ಗಾಯತ್ರಿ ನಾಯಕ್, ಝೀನಾ ಕೊಲಾಸೊ, ಜಯಶ್ರೀ, ಜ್ಯೋತಿ ಶೆಟ್ಟಿ, ಆತ್ಮೀ ರೈ, ಸಹಮತ ಬೊಳುವಾರು, ಪೃಥ್ವೀ ಸೌಗಂಧಿಕ, ಸುಮನಾ ಟಿ. ಆರ್., ಗೀತಾಂಜಲಿ, ಸಂಹಿತಾ ಶರ್ಮ, ರೇಷ್ಮಾ ಶೆಟ್ಟಿ ಹಾಗೂ ಗೀತಾ ವಸಂತ ನಾಯಕ್ ಅವರ ಕಲಾ ರಚನೆಗಳು ಪ್ರದರ್ಶನಗೊಳ್ಳಲಿವೆ ಎಂದು ಚಂದ್ರ ಸೌಗಂಧಿಕ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…