Advertisement
ಸುದ್ದಿಗಳು

ಆ.28 | ಸೌಜನ್ಯ ಪ್ರಕರಣ ನ್ಯಾಯಕ್ಕೆ ಆಗ್ರಹಿಸಿ ಪುತ್ತೂರಿನಲ್ಲಿ ಜನ ಜಾಗೃತಿ ಸಭೆ

Share

11 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕು.ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸುವ ಮೂಲಕ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಪ್ರಕರಣವನ್ನು ಮರುತನಿಖೆ ಮಾಡಬೇಕು ಮತ್ತು ನಿರ್ದೋಷಿ ಸಂತೋಷ್ ರಾವ್ ಅವರಿಗಾದ ನಷ್ಟವನ್ನು ಭರಿಸಿ ಪರಿಹಾರಕ್ಕಾಗಿ ಆಗ್ರಹಿಸಿ ಪುತ್ತೂರಿನಲ್ಲಿ ಅಭಿನವ ಭಾರತ ಮಿತ್ರ ಮಂಡಳಿ ಪುತ್ತೂರು ಮತ್ತು ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಆ.28 ರಂದು ಜನಜಾಗೃತಿ ಸಭೆ ಮತ್ತು ಜನಜಾಗೃತಿ ಮೆರವಣಿಗೆ ನಡೆಯಲಿದೆ ಎಂದು ಅಭಿನವ ಭಾರತ ಮಿತ್ರ ಮಂಡಳಿಯ ಪ್ರವರ್ತಕ ದಿನೇಶ್ ಜೈನ್ ತಿಳಿಸಿದ್ದಾರೆ.

Advertisement

ಅವರು  ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆ.28 ರಂದು ಸಂಜೆ ಗಂಟೆ 3 ಗಂಟೆಗೆ ದರ್ಬೆಯಿಂದ ಮೆರವಣಿಗೆ ಮೂಲಕ ಪುತ್ತೂರು ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬೃಹತ್ ಜನಜಾಗೃತಿ ಸಭೆ ನಡೆಯಲಿದೆ. ಪ್ರಜಾಪ್ರಭುತ್ವ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ, ಪ್ರವೀಣ್ ವಾಲ್ಕೆ, ಪ್ರಸಾದ್ ಅತ್ತಾವರ ಅವರು ಜನಜಾಗೃತಿ ವೇದಿಕೆ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜನಜಾಗೃತಿ ಸಭೆಗೂ ಮುಂದೆ ಸಂಜೆ ಗಂಟೆ 3ಕ್ಕೆ ದರ್ಬೆಯಿಂದ ಮೆರವಣಿಗೆ ಹೊರಡಲಿದೆ. ಮೆರವಣಿಗೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಬಾರದು ಎಂದು ನಿರೀಕ್ಷಣಾ ಮಂದಿರ ಬಳಿಯಿಂದ ಸಂತ ಫಿಲೋಮಿನಾ ಕಾಲೇಜು ತನಕದ ರಸ್ತೆಯು ಒಂದು ಬದಿಯಲ್ಲಿ ಎಲ್ಲರು ಸೇರಲಿದ್ದು ಅಲ್ಲಿಂದ ದರ್ಬೆ ವೃತ್ತಕ್ಕೆ ಬಂದು ಮೆರವಣಿಗೆ ಆರಂಭಂಗೊಳ್ಳಲಿದೆ. ರಸ್ತೆಯುದ್ದಕ್ಕೂ ಒಂದು ಬದಿಯಿಂದ ಮೆರವಣಿಗೆ ಮತ್ತೊಂದು ಬದಿಯಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಎಲ್ಲೂ ಕೂಡಾ ರಸ್ತೆ ತಡೆ, ಬಂದ್ ಮಾಡದೆ ಮೆರವಣಿಗೆ ದರ್ಬೆಯಿಂದ ಬಸ್‌ನಿಲ್ದಾಣದ ಬಳಿಯಿಂದ ಮುಖ್ಯರಸ್ತೆಯಾಗಿ ಪ್ರಧಾನ ಅಂಚೆಕಚೇರಿಯ ಬಳಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಸಾಗಿ ಸಂಜೆ ಗಂಟೆ 4ಕ್ಕೆ ಸರಿಯಾಗಿ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಅವರಣದಲ್ಲಿ ಜನಜಾಗೃತಿ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.

ಬೆಳ್ತಗಂಡಿ ಪ್ರಜಾ ಪ್ರಭುತ್ವ ವೇದಿಕೆಯ ಅನಿಲ್ ಕುಮಾರ್ ಅವರು ಮಾತನಾಡಿ ಸಂತೋಷ್ ರಾವ್ ಅವರನ್ನು ಟಾರ್ಗೆಟ್ ಮಾಡಿ ತನಿಖೆ ನಡೆಸಲಾಗಿದೆ. ಬಳಿಕ ಅವರು ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಕಳೆದ 11 ವರ್ಷಗಳಿಂದ ನಾವು ಹೋರಾಟ ನಡೆಸುತ್ತಾ ಬಂದಿದ್ದೇವೆ. ಸೌಜನ್ಯ ಪ್ರಕರಣದಲ್ಲಿ ಅತ್ಯಾಚಾರ ಮಾಡಿದವರು ಯಾರು, ನಿಜವಾದ ಆರೋಪಿಗಳನ್ನು ರಕ್ಷಣೆ ಮಾಡಿದವರು ಯಾರು ಇದ್ದಾರೋ ಅದು ಜಗತ್ತಿಗೆ ಗೊತ್ತಾಗಬೇಕು. ಆ ಪ್ರಕರಣಕ್ಕೆ ನ್ಯಾಯ ಸಿಗಬೇಕು. ಆ ಪ್ರಕರಣಕ್ಕೆ ಜನರೇ ಮಾತನಾಡಬೇಕು. 11 ವರ್ಷಗಳಿಂದ ಈ ಪ್ರಕರಣಕ್ಕೆ ನ್ಯಾಯ ಒದಗಿಸದೆ ಇರಲು ಕಾರಣ ಯಾರು. ಪ್ರಕರಣವನ್ನು ಮುಚ್ಚಿ ಹಾಕಿದವರು ಯಾರು, ನಿಜವಾದ ಆರೋಪಿಗಳನ್ನು ಬಿಟ್ಟವರು ಯಾರು ಎಂಬುದು ಮುಖ್ಯ. ಒಟ್ಟಿನಲ್ಲಿ ಪ್ರಕರಣಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಭಿನವ ಭಾರತ ಮಿತ್ರ ಮಂಡಳಿಯ ಪ್ರವರ್ತಕರಾದ ನವೀನ್ ಕುಲಾಲ್ ಮತ್ತು ಧನ್ಯ ಕುಮಾರ್ ಬೆಳಂದೂರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

14 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

15 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

15 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

15 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

15 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

15 hours ago