Advertisement
ಸುದ್ದಿಗಳು

ಆ.28 | ಸೌಜನ್ಯ ಪ್ರಕರಣ ನ್ಯಾಯಕ್ಕೆ ಆಗ್ರಹಿಸಿ ಪುತ್ತೂರಿನಲ್ಲಿ ಜನ ಜಾಗೃತಿ ಸಭೆ

Share

11 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕು.ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸುವ ಮೂಲಕ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಪ್ರಕರಣವನ್ನು ಮರುತನಿಖೆ ಮಾಡಬೇಕು ಮತ್ತು ನಿರ್ದೋಷಿ ಸಂತೋಷ್ ರಾವ್ ಅವರಿಗಾದ ನಷ್ಟವನ್ನು ಭರಿಸಿ ಪರಿಹಾರಕ್ಕಾಗಿ ಆಗ್ರಹಿಸಿ ಪುತ್ತೂರಿನಲ್ಲಿ ಅಭಿನವ ಭಾರತ ಮಿತ್ರ ಮಂಡಳಿ ಪುತ್ತೂರು ಮತ್ತು ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಆ.28 ರಂದು ಜನಜಾಗೃತಿ ಸಭೆ ಮತ್ತು ಜನಜಾಗೃತಿ ಮೆರವಣಿಗೆ ನಡೆಯಲಿದೆ ಎಂದು ಅಭಿನವ ಭಾರತ ಮಿತ್ರ ಮಂಡಳಿಯ ಪ್ರವರ್ತಕ ದಿನೇಶ್ ಜೈನ್ ತಿಳಿಸಿದ್ದಾರೆ.

ಅವರು  ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆ.28 ರಂದು ಸಂಜೆ ಗಂಟೆ 3 ಗಂಟೆಗೆ ದರ್ಬೆಯಿಂದ ಮೆರವಣಿಗೆ ಮೂಲಕ ಪುತ್ತೂರು ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬೃಹತ್ ಜನಜಾಗೃತಿ ಸಭೆ ನಡೆಯಲಿದೆ. ಪ್ರಜಾಪ್ರಭುತ್ವ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ, ಪ್ರವೀಣ್ ವಾಲ್ಕೆ, ಪ್ರಸಾದ್ ಅತ್ತಾವರ ಅವರು ಜನಜಾಗೃತಿ ವೇದಿಕೆ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜನಜಾಗೃತಿ ಸಭೆಗೂ ಮುಂದೆ ಸಂಜೆ ಗಂಟೆ 3ಕ್ಕೆ ದರ್ಬೆಯಿಂದ ಮೆರವಣಿಗೆ ಹೊರಡಲಿದೆ. ಮೆರವಣಿಗೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಬಾರದು ಎಂದು ನಿರೀಕ್ಷಣಾ ಮಂದಿರ ಬಳಿಯಿಂದ ಸಂತ ಫಿಲೋಮಿನಾ ಕಾಲೇಜು ತನಕದ ರಸ್ತೆಯು ಒಂದು ಬದಿಯಲ್ಲಿ ಎಲ್ಲರು ಸೇರಲಿದ್ದು ಅಲ್ಲಿಂದ ದರ್ಬೆ ವೃತ್ತಕ್ಕೆ ಬಂದು ಮೆರವಣಿಗೆ ಆರಂಭಂಗೊಳ್ಳಲಿದೆ. ರಸ್ತೆಯುದ್ದಕ್ಕೂ ಒಂದು ಬದಿಯಿಂದ ಮೆರವಣಿಗೆ ಮತ್ತೊಂದು ಬದಿಯಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಎಲ್ಲೂ ಕೂಡಾ ರಸ್ತೆ ತಡೆ, ಬಂದ್ ಮಾಡದೆ ಮೆರವಣಿಗೆ ದರ್ಬೆಯಿಂದ ಬಸ್‌ನಿಲ್ದಾಣದ ಬಳಿಯಿಂದ ಮುಖ್ಯರಸ್ತೆಯಾಗಿ ಪ್ರಧಾನ ಅಂಚೆಕಚೇರಿಯ ಬಳಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಸಾಗಿ ಸಂಜೆ ಗಂಟೆ 4ಕ್ಕೆ ಸರಿಯಾಗಿ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಅವರಣದಲ್ಲಿ ಜನಜಾಗೃತಿ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.

ಬೆಳ್ತಗಂಡಿ ಪ್ರಜಾ ಪ್ರಭುತ್ವ ವೇದಿಕೆಯ ಅನಿಲ್ ಕುಮಾರ್ ಅವರು ಮಾತನಾಡಿ ಸಂತೋಷ್ ರಾವ್ ಅವರನ್ನು ಟಾರ್ಗೆಟ್ ಮಾಡಿ ತನಿಖೆ ನಡೆಸಲಾಗಿದೆ. ಬಳಿಕ ಅವರು ನಿರಪರಾಧಿ ಎಂದು ಬಿಡುಗಡೆ ಮಾಡಲಾಗಿದೆ. ಕಳೆದ 11 ವರ್ಷಗಳಿಂದ ನಾವು ಹೋರಾಟ ನಡೆಸುತ್ತಾ ಬಂದಿದ್ದೇವೆ. ಸೌಜನ್ಯ ಪ್ರಕರಣದಲ್ಲಿ ಅತ್ಯಾಚಾರ ಮಾಡಿದವರು ಯಾರು, ನಿಜವಾದ ಆರೋಪಿಗಳನ್ನು ರಕ್ಷಣೆ ಮಾಡಿದವರು ಯಾರು ಇದ್ದಾರೋ ಅದು ಜಗತ್ತಿಗೆ ಗೊತ್ತಾಗಬೇಕು. ಆ ಪ್ರಕರಣಕ್ಕೆ ನ್ಯಾಯ ಸಿಗಬೇಕು. ಆ ಪ್ರಕರಣಕ್ಕೆ ಜನರೇ ಮಾತನಾಡಬೇಕು. 11 ವರ್ಷಗಳಿಂದ ಈ ಪ್ರಕರಣಕ್ಕೆ ನ್ಯಾಯ ಒದಗಿಸದೆ ಇರಲು ಕಾರಣ ಯಾರು. ಪ್ರಕರಣವನ್ನು ಮುಚ್ಚಿ ಹಾಕಿದವರು ಯಾರು, ನಿಜವಾದ ಆರೋಪಿಗಳನ್ನು ಬಿಟ್ಟವರು ಯಾರು ಎಂಬುದು ಮುಖ್ಯ. ಒಟ್ಟಿನಲ್ಲಿ ಪ್ರಕರಣಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಭಿನವ ಭಾರತ ಮಿತ್ರ ಮಂಡಳಿಯ ಪ್ರವರ್ತಕರಾದ ನವೀನ್ ಕುಲಾಲ್ ಮತ್ತು ಧನ್ಯ ಕುಮಾರ್ ಬೆಳಂದೂರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

4 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago