ಸೌಜನ್ಯ ಪ್ರಕರಣ | ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪಾದಯಾತ್ರೆ | ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ನ್ಯಾಯಕ್ಕಾಗಿ ಪ್ರಾರ್ಥನೆ |

August 27, 2023
9:35 PM
ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ನೇತ್ರಾವತಿ ಸ್ನಾಘಟ್ಟದಿಂದ ಧರ್ಮಸ್ಥಳದಲ್ಲಿ ಪ್ರವೇಶದ್ವಾರದ ವರೆಗೆ ಶಿವಪಂಚಾಕ್ಷರಿ ಪಠಣದೊಂದಿಗೆ ಪಾದಯಾತ್ರೆ ನಡೆಯಿತು.
ಸೌಜನ್ಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆಯಾಗಬೇಕು ಎಂದು ಒತ್ತಾಯಿಸಿ  ಭಾನುವಾರ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ನೇತ್ರಾವತಿ ಸ್ನಾಘಟ್ಟದಿಂದ ಧರ್ಮಸ್ಥಳದಲ್ಲಿ ಪ್ರವೇಶದ್ವಾರದ ವರೆಗೆ ಶಿವಪಂಚಾಕ್ಷರಿ ಪಠಣದೊಂದಿಗೆ ಪಾದಯಾತ್ರೆಯಲ್ಲಿ ಬಂದು ಬಳಿಕ ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ಬಂದು ನ್ಯಾಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಸೌಜನ್ಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಿ ಉಗ್ರ ಶಿಕ್ಷೆ ನೀಡಬೇಕು. ತನ್ಮೂಲಕ ಕೊಲೆಯಾದ ಸೌಜನ್ಯ ಆತ್ಮಕ್ಕೆ ಶಾಂತಿ ದೊರಕುವಂತಾಗಬೇಕು ಎಂದು ಕುಸುಮಾವತಿ ಕಣ್ಣೀರು ಸುರಿಸಿ ಅಣ್ಣಪ್ಪಸ್ವಾಮಿ ಪದತಲದಲ್ಲಿ ಪ್ರಾರ್ಥನೆ ಸಲ್ಲಿಸಿ  ಪ್ರಸಾದ ಸ್ವೀಕರಿಸಿದರು.
ಇದೇ ವೇಳೆ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ ಜೈನ್, ಅಣ್ಣಪ್ಪಸ್ವಾಮಿ ಬೆಟ್ಟದ ತಳದಲ್ಲಿ ಪ್ರಾರ್ಥನೆ ಸಲ್ಲಿಸಿ ಸೌಜನ್ಯ ಕೊಲೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಆಣೆಪ್ರಮಾಣ ಮಾಡಿದರು. ತಮ್ಮ ಬಗ್ಗೆ ಅಪಪ್ರಚಾರವಾಗುತ್ತಿದೆ ನೈಜ ಆರೋಪಿ ಪತ್ತೆಯಾಗಿ ಉಗ್ರಶಿಕ್ಷೆ ನೀಡಬೇಕು ಎಂದರು.
ಧೀರಜ್ ಕೆಲ್ಲ ಮಾತನಾಡಿ ತಾವು ಕಾನೂನು ಪ್ರಕಾರ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ.
ತಾವು ಯಾವುದೇ ರೀತಿಯ ತನಿಖೆಗೆ ಸಿದ್ಧರಿದ್ದೇವೆ. ತಮ್ಮ ಸಂಸಾರದ ಬಗ್ಯೆಯೂ ಮಾಧ್ಯಮದವರು ಕಾಳಜಿ ವಹಿಸಿ ಅಪಪ್ರಚಾರ ಮಾಡಬಾರದು ಎಂದು ಸಲಹೆ ನೀಡಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror