Advertisement
ಸುದ್ದಿಗಳು

ಸೌಜನ್ಯ ಪ್ರಕರಣ | ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪಾದಯಾತ್ರೆ | ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ನ್ಯಾಯಕ್ಕಾಗಿ ಪ್ರಾರ್ಥನೆ |

Share
ಸೌಜನ್ಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆಯಾಗಬೇಕು ಎಂದು ಒತ್ತಾಯಿಸಿ ಭಾನುವಾರ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ನೇತ್ರಾವತಿ ಸ್ನಾಘಟ್ಟದಿಂದ ಧರ್ಮಸ್ಥಳದಲ್ಲಿ ಪ್ರವೇಶದ್ವಾರದ ವರೆಗೆ ಶಿವಪಂಚಾಕ್ಷರಿ ಪಠಣದೊಂದಿಗೆ ಪಾದಯಾತ್ರೆಯಲ್ಲಿ ಬಂದು ಬಳಿಕ ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ಬಂದು ನ್ಯಾಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಸೌಜನ್ಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಿ ಉಗ್ರ ಶಿಕ್ಷೆ ನೀಡಬೇಕು. ತನ್ಮೂಲಕ ಕೊಲೆಯಾದ ಸೌಜನ್ಯ ಆತ್ಮಕ್ಕೆ ಶಾಂತಿ ದೊರಕುವಂತಾಗಬೇಕು ಎಂದು ಕುಸುಮಾವತಿ ಕಣ್ಣೀರು ಸುರಿಸಿ ಅಣ್ಣಪ್ಪಸ್ವಾಮಿ ಪದತಲದಲ್ಲಿ ಪ್ರಾರ್ಥನೆ ಸಲ್ಲಿಸಿ  ಪ್ರಸಾದ ಸ್ವೀಕರಿಸಿದರು.
ಇದೇ ವೇಳೆ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ ಜೈನ್, ಅಣ್ಣಪ್ಪಸ್ವಾಮಿ ಬೆಟ್ಟದ ತಳದಲ್ಲಿ ಪ್ರಾರ್ಥನೆ ಸಲ್ಲಿಸಿ ಸೌಜನ್ಯ ಕೊಲೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಆಣೆಪ್ರಮಾಣ ಮಾಡಿದರು. ತಮ್ಮ ಬಗ್ಗೆ ಅಪಪ್ರಚಾರವಾಗುತ್ತಿದೆ ನೈಜ ಆರೋಪಿ ಪತ್ತೆಯಾಗಿ ಉಗ್ರಶಿಕ್ಷೆ ನೀಡಬೇಕು ಎಂದರು.
ಧೀರಜ್ ಕೆಲ್ಲ ಮಾತನಾಡಿ ತಾವು ಕಾನೂನು ಪ್ರಕಾರ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ.
ತಾವು ಯಾವುದೇ ರೀತಿಯ ತನಿಖೆಗೆ ಸಿದ್ಧರಿದ್ದೇವೆ. ತಮ್ಮ ಸಂಸಾರದ ಬಗ್ಯೆಯೂ ಮಾಧ್ಯಮದವರು ಕಾಳಜಿ ವಹಿಸಿ ಅಪಪ್ರಚಾರ ಮಾಡಬಾರದು ಎಂದು ಸಲಹೆ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

4 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

7 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

11 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

11 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

22 hours ago