Advertisement
ಸುದ್ದಿಗಳು

ಸೌಜನ್ಯ ಪ್ರಕರಣ | ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪಾದಯಾತ್ರೆ | ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ನ್ಯಾಯಕ್ಕಾಗಿ ಪ್ರಾರ್ಥನೆ |

Share
ಸೌಜನ್ಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆಯಾಗಬೇಕು ಎಂದು ಒತ್ತಾಯಿಸಿ ಭಾನುವಾರ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ನೇತ್ರಾವತಿ ಸ್ನಾಘಟ್ಟದಿಂದ ಧರ್ಮಸ್ಥಳದಲ್ಲಿ ಪ್ರವೇಶದ್ವಾರದ ವರೆಗೆ ಶಿವಪಂಚಾಕ್ಷರಿ ಪಠಣದೊಂದಿಗೆ ಪಾದಯಾತ್ರೆಯಲ್ಲಿ ಬಂದು ಬಳಿಕ ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ಬಂದು ನ್ಯಾಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಸೌಜನ್ಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಿ ಉಗ್ರ ಶಿಕ್ಷೆ ನೀಡಬೇಕು. ತನ್ಮೂಲಕ ಕೊಲೆಯಾದ ಸೌಜನ್ಯ ಆತ್ಮಕ್ಕೆ ಶಾಂತಿ ದೊರಕುವಂತಾಗಬೇಕು ಎಂದು ಕುಸುಮಾವತಿ ಕಣ್ಣೀರು ಸುರಿಸಿ ಅಣ್ಣಪ್ಪಸ್ವಾಮಿ ಪದತಲದಲ್ಲಿ ಪ್ರಾರ್ಥನೆ ಸಲ್ಲಿಸಿ  ಪ್ರಸಾದ ಸ್ವೀಕರಿಸಿದರು.
ಇದೇ ವೇಳೆ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ ಜೈನ್, ಅಣ್ಣಪ್ಪಸ್ವಾಮಿ ಬೆಟ್ಟದ ತಳದಲ್ಲಿ ಪ್ರಾರ್ಥನೆ ಸಲ್ಲಿಸಿ ಸೌಜನ್ಯ ಕೊಲೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಆಣೆಪ್ರಮಾಣ ಮಾಡಿದರು. ತಮ್ಮ ಬಗ್ಗೆ ಅಪಪ್ರಚಾರವಾಗುತ್ತಿದೆ ನೈಜ ಆರೋಪಿ ಪತ್ತೆಯಾಗಿ ಉಗ್ರಶಿಕ್ಷೆ ನೀಡಬೇಕು ಎಂದರು.
ಧೀರಜ್ ಕೆಲ್ಲ ಮಾತನಾಡಿ ತಾವು ಕಾನೂನು ಪ್ರಕಾರ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ.
ತಾವು ಯಾವುದೇ ರೀತಿಯ ತನಿಖೆಗೆ ಸಿದ್ಧರಿದ್ದೇವೆ. ತಮ್ಮ ಸಂಸಾರದ ಬಗ್ಯೆಯೂ ಮಾಧ್ಯಮದವರು ಕಾಳಜಿ ವಹಿಸಿ ಅಪಪ್ರಚಾರ ಮಾಡಬಾರದು ಎಂದು ಸಲಹೆ ನೀಡಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

24 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

24 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago