Advertisement
ಸುದ್ದಿಗಳು

ಸೌಜನ್ಯ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬೃಹತ್ ಜನಜಾಗೃತಿ ಜಾಥಾ, ಸಭೆ |

Share

ಪುತ್ತೂರಿನ ಅಭಿನವ ಭಾರತ ಮಿತ್ರ ಮಂಡಳಿ ಮತ್ತು ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ವತಿಯಿಂದ ಸೋಮವಾರ ಸಂಜೆ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಜನಜಾಗೃತಿ ಜಾಥಾ ಹಾಗೂ ಸಭೆ ನಡೆಯಿತು.

Advertisement
Advertisement
Advertisement
Advertisement

ಸಭೆಯಲ್ಲಿ ಮಾತನಾಡಿದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ, ಕಾನೂನು ವ್ಯವಸ್ಥೆಯೊಳಗೆ ಕಳ್ಳರಿದ್ದಾರೆ. ಇದರಿಂದಾಗಿ ನಾವು ಕಾನೂನು ವ್ಯವಸ್ಥೆಯ ಬಗ್ಗೆ ನಂಬಿಕೆ ಕಳಕೊಳ್ಳುವಂತಾಗಿದೆ. ಉಳ್ಳವರಿಗೆ ಮಾತ್ರ ಕಾನೂನು ಎಂಬ ವ್ಯವಸ್ಥೆಯಿಂದಾಗಿ ನಾವಿಂದು ನ್ಯಾಯಕ್ಕಾಗಿ ಹೋರಾಟ ಮಾಡಬೇಕಾಗಿ ಬಂದಿದೆ ಎಂದ ಅವರು ಸೌಜನ್ಯ ಕೊಲೆ ಪ್ರಕರಣದ ತನಿಖಾಧಿಕಾರಿಗಳು ತಮ್ಮ ಮಕ್ಕಳಿಗೆ ಇಂತಹ ಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ನ್ಯಾಯಪೀಠ ಮತ್ತು ಧರ್ಮಪೀಠದಲ್ಲಿ ನ್ಯಾಯ ದೊರಕದಿದ್ದಲ್ಲಿ ನಾವು ಯಾರಲ್ಲಿ ನ್ಯಾಯ ಕೇಳಬೇಕು. ಕೊಲೆಗೀಡಾದ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಹೋರಾಟಕ್ಕೆ ಇಳಿದವರು ನಾವು. ಇದರ ಜೊತೆಗೆ ಧರ್ಮ ಪೀಠದಲ್ಲಿ ಧರ್ಮ ಉಳಿಯಬೇಕು ಎಂಬುದೂ ನಮ್ಮ ಉದ್ದೇಶ ಎಂದರು.

Advertisement

ಸೌಜನ್ಯ ಅವರ ತಾಯಿ ಕುಸುಮಾವತಿ ಮಾತನಾಡಿ ನನ್ನ ಮಗಳಿಗೆ ಆಗಿರುವ ಸ್ಥಿತಿ ಇನ್ನೊಂದು ಹೆಣ್ಣು ಮಗುವಿಗೆ ಆಗಬಾರದು ಎಂಬ ನಿಟ್ಟಿನಲ್ಲಿ ನಾನು ಈ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ಬಿಜೆಪಿಯವರು ಇದೀಗ ನನ್ನ ಮಗಳ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ಆದರೆ 11 ವರ್ಷಗಳಿಂದ ಅವರು ನಮಗೆ ನ್ಯಾಯ ಕೊಟ್ಟಿಲ್ಲ. ನಳಿನ್ ಕುಮಾರ್ ಕಟೀಲ್ ಅವರೂ ನಮಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಿಲ್ಲ. ಮುಂದಿನ ದಿನಗಳಲ್ಲಿ ನಮಗೆ ಪ್ರಧಾನಿ ಮೋದಿ ಬಳಿ ಹೋಗಿ ನ್ಯಾಯ ಕೇಳಬೇಕು ಅದಕ್ಕಾಗಿ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

Advertisement

ಈ ಸಂದರ್ಭದಲ್ಲಿ ಸೌಜನ್ಯ ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಸಂತೋಷ್ ರಾವ್ ಅವರ ಪರವಾಗಿ ವಾದಿಸಿದ್ದ ನ್ಯಾಯವಾದಿಗಳಾದ ಮೋಹಿತ್ ಕುಮಾರ್ ಮತ್ತು ನವೀನ್ ಪದ್ಯಾಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Advertisement

ವೇದಿಕೆಯಲ್ಲಿ ಅಭಿನವ ಭಾರತ ಮಿತ್ರ ಮಂಡಳಿಯ ಪ್ರವರ್ತಕರಾದ ದಿನೇಶ್ ಜೈನ್ , ಅಭಿನವ ಭಾರತ ಮಿತ್ರ ಮಂಡಳಿಯ ಅಧ್ಯಕ್ಷ ಧನ್ಯಕುಮಾರ್ ಬೆಳಂದೂರು, ನವೀನ್ ಕುಲಾಲ್ ಉಪಸ್ಥಿತರಿದ್ದರು.

ಸಭೆಯ ಮೊದಲು ಪ್ರತಿಭಟನೆಯ ಜನಜಾಗೃತಿ ಮೆರವಣಿಗೆ ನಡೆಯಿತು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago