ಸುದ್ದಿಗಳು

ಸೌಜನ್ಯ ಪ್ರಕರಣ | ಬೆಳ್ತಂಗಡಿಯಲ್ಲಿ ಬೃಹತ್‌ ಸಭೆ | ಸತ್ಯ, ಧರ್ಮ, ನ್ಯಾಯಯುತ ಹೋರಾಟದ ಜೊತೆ ಯಾವತ್ತೂ ಆದಿಚುಂಚನಗಿರಿ ಮಠ ಇದೆ | ಧರ್ಮಪಾಲನಾಥ ಶ್ರೀ |

Share

ಬೆಳ್ತಂಗಡಿಯ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ  ಪ್ರಕರಣವನ್ನು ನ್ಯಾಯಾಂಗದ ಸುಪರ್ಧಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಬೃಹತ್‌ ಪ್ರತಿಭಟನಾ ಸಭೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಎದುರು ಭಾನುವಾರ ನಡೆಯಿತು.

Advertisement

ಪ್ರತಿಭಟನಾ ಸಭೆಯಲ್ಲಿ ಆಶಿರ್ವಚನ ನೀಡಿದ ಆದಿಚುಂಚನಗಿರಿ ಮಠದ ಮಂಗಳೂರು ಶಾಖಾ ಮಠದ  ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಸೌಜನ್ಯ ಪ್ರಕರಣದಲ್ಲಿ ಎಲ್ಲಾ ತನಿಖೆಗಳು ವಿಫಲವಾದ್ದು ಈ  ದೇಶದ ದುರಂತ ಎಂದರು. ಈಚೆಗೆ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಅವರ ಕುಟುಂಬದವರು ಮಠಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಎಳೆ ಎಳೆಯಾಗಿ ಮಾಹಿತಿ ನೀಡಿದ್ದರು. ಸತ್ಯ, ನೀತಿ, ನ್ಯಾಯ, ಧರ್ಮಕ್ಕೆ ಎಲ್ಲರೂ ಒಂದಾಗಿರಬೇಕಾಗಿದೆ. ಸಮಾಜದ ಯಾವುದೇ ಜನರಿಗೂ ಅನ್ಯಾಯ ಆಗಬಾರದು ಎಂಬುದು ನಮ್ಮ ನಿಲುವುವಾಗಿದೆ. ಸತ್ಯ, ನ್ಯಾಯಯುತ ಹೋರಾಟಕ್ಕೆ ಯಾವತ್ತೂ ಆದಿಚುಂಚನಗಿರಿ ಮಠ ಜೊತೆಗಿರುತ್ತದೆ.

ಈ ಪ್ರಕರಣದಲ್ಲಿ ಸಂತೋಷ ರಾವ್‌ ಅಪರಾಧಿ ಅಲ್ಲ ಎಂದ ಮೇಲೆ ಇನ್ನೊಮ್ಮೆ ಅಪರಾಧಿ ಇರಬೇಕಲ್ಲ, ಅವನು ಯಾರು ? ಅದು ಬೇಕಾಗಿದೆ. ಸಂತೋಷ ರಾವ್‌ ಅವರ ಬದುಕು ಮತ್ತೆ ಕಟ್ಟಲು ಸಾಧ್ಯವಿಲ್ಲ, ಅವರಿಗೂ ನ್ಯಾಯ ಬೇಕು, ಕುಸುಮಾವತಿ ಹಾಗೂ ಅವರ ಕುಟುಂಬಕ್ಕೂ  ರಕ್ಷಣೆ ಬೇಕಿದೆ. ಇದಕ್ಕಾಗಿ ಈ ಪ್ರಕರಣದಲ್ಲಿ ನ್ಯಾಯಸಿಗಲು, ಅಂದು ತನಿಖೆ ನಡೆಸಿದ ಪೊಲೀಸ್‌ ಅಧಿಕಾರಿ, ವೈದ್ಯರನ್ನು ಮೊದಲು ತನಿಖೆ ಮಾಡಿಸಬೇಕು, ಮಂಪರು ಪರೀಕ್ಷೆ ಮಾಡದೇ ಇದ್ದರೆ ಸತ್ಯ ಹೊರಬಾರದು ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಸತ್ಯ, ನ್ಯಾಯ ಧರ್ಮ ನಿಷ್ಟೆಯಲ್ಲಿ ಯಾರು ಹೋಗುತ್ತಾರೋ ಅವರಿಗೆ ಯಾವತ್ತೂ ಜಯ, ಅವರ ಹಿಂದೆ ಯಾವತ್ತೂ ಮಠ ಇರುತ್ತದೆ. ಮಠ ಒಂದು ಸಮುದಾಯವಾಗಿದ್ದರೂ ಎಲ್ಲರನ್ನೂ ಒಪ್ಪಿಕೊಂಡ ಮಠ, ಯಾರಿಗೇ ಅನ್ಯಾಯ ಆದರೂ ಅವರ ಹೊತೆಗೆ ಮಠ ಇರುತ್ತದೆ ಎಂದರು.

11 ವರ್ಷಗಳಿಂದಲೂ ಸತ್ಯ ಹುಡುಕುತ್ತೇವೆ ಎಂದು ನಿಂತಿರುವ ಮಹೇಶ್‌ ಶೆಟ್ಟಿ ತಿಮರೋಡಿ ಅವರ ಜೊತೆ ಸಮಾಜ ಹಾಗೂ ಮಠ ಇದೆ. ಸೌಜನ್ಯ ಮಹಾನ್‌ ಶಕ್ತಿ, ಅದು ಸ್ತ್ರೀಶಕ್ತಿ, ಅದು ಕಾಳಿ ಸ್ವರೂಪ ಪಡೆದು ಇಡೀ ರಾಜಾದ್ಯಂತ ಆವಿರ್ಭಾವ ಮಾಡುತ್ತದೆ, ಅದಕ್ಕೆ ಮೊದಲು ಸರ್ಕಾರ ಗಮನಿಸಿ ನ್ಯಾಯ ಸಿಗುವಂತೆ ಮಾಡಬೇಕು ಎಂದು ಶ್ರೀಗಳು ಒತ್ತಾಯಿಸಿದರು.

ಸೌಜನ್ಯ ಪರ ಹೋರಾಟದ ಮುಂಚೂಣಿ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅಧ್ಯಕ್ಷರಾಗಿರುವ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸಭೆ ಆಯೋಜನೆಗೊಂಡಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

2 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

19 hours ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

19 hours ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

1 day ago