ಬೆಳ್ತಂಗಡಿಯ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನ್ಯಾಯಾಂಗದ ಸುಪರ್ಧಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಸಭೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಎದುರು ಭಾನುವಾರ ನಡೆಯಿತು.
ಪ್ರತಿಭಟನಾ ಸಭೆಯಲ್ಲಿ ಆಶಿರ್ವಚನ ನೀಡಿದ ಆದಿಚುಂಚನಗಿರಿ ಮಠದ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಸೌಜನ್ಯ ಪ್ರಕರಣದಲ್ಲಿ ಎಲ್ಲಾ ತನಿಖೆಗಳು ವಿಫಲವಾದ್ದು ಈ ದೇಶದ ದುರಂತ ಎಂದರು. ಈಚೆಗೆ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಅವರ ಕುಟುಂಬದವರು ಮಠಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಎಳೆ ಎಳೆಯಾಗಿ ಮಾಹಿತಿ ನೀಡಿದ್ದರು. ಸತ್ಯ, ನೀತಿ, ನ್ಯಾಯ, ಧರ್ಮಕ್ಕೆ ಎಲ್ಲರೂ ಒಂದಾಗಿರಬೇಕಾಗಿದೆ. ಸಮಾಜದ ಯಾವುದೇ ಜನರಿಗೂ ಅನ್ಯಾಯ ಆಗಬಾರದು ಎಂಬುದು ನಮ್ಮ ನಿಲುವುವಾಗಿದೆ. ಸತ್ಯ, ನ್ಯಾಯಯುತ ಹೋರಾಟಕ್ಕೆ ಯಾವತ್ತೂ ಆದಿಚುಂಚನಗಿರಿ ಮಠ ಜೊತೆಗಿರುತ್ತದೆ.
ಈ ಪ್ರಕರಣದಲ್ಲಿ ಸಂತೋಷ ರಾವ್ ಅಪರಾಧಿ ಅಲ್ಲ ಎಂದ ಮೇಲೆ ಇನ್ನೊಮ್ಮೆ ಅಪರಾಧಿ ಇರಬೇಕಲ್ಲ, ಅವನು ಯಾರು ? ಅದು ಬೇಕಾಗಿದೆ. ಸಂತೋಷ ರಾವ್ ಅವರ ಬದುಕು ಮತ್ತೆ ಕಟ್ಟಲು ಸಾಧ್ಯವಿಲ್ಲ, ಅವರಿಗೂ ನ್ಯಾಯ ಬೇಕು, ಕುಸುಮಾವತಿ ಹಾಗೂ ಅವರ ಕುಟುಂಬಕ್ಕೂ ರಕ್ಷಣೆ ಬೇಕಿದೆ. ಇದಕ್ಕಾಗಿ ಈ ಪ್ರಕರಣದಲ್ಲಿ ನ್ಯಾಯಸಿಗಲು, ಅಂದು ತನಿಖೆ ನಡೆಸಿದ ಪೊಲೀಸ್ ಅಧಿಕಾರಿ, ವೈದ್ಯರನ್ನು ಮೊದಲು ತನಿಖೆ ಮಾಡಿಸಬೇಕು, ಮಂಪರು ಪರೀಕ್ಷೆ ಮಾಡದೇ ಇದ್ದರೆ ಸತ್ಯ ಹೊರಬಾರದು ಎಂದು ಶ್ರೀಗಳು ಅಭಿಪ್ರಾಯಪಟ್ಟರು.
ಸತ್ಯ, ನ್ಯಾಯ ಧರ್ಮ ನಿಷ್ಟೆಯಲ್ಲಿ ಯಾರು ಹೋಗುತ್ತಾರೋ ಅವರಿಗೆ ಯಾವತ್ತೂ ಜಯ, ಅವರ ಹಿಂದೆ ಯಾವತ್ತೂ ಮಠ ಇರುತ್ತದೆ. ಮಠ ಒಂದು ಸಮುದಾಯವಾಗಿದ್ದರೂ ಎಲ್ಲರನ್ನೂ ಒಪ್ಪಿಕೊಂಡ ಮಠ, ಯಾರಿಗೇ ಅನ್ಯಾಯ ಆದರೂ ಅವರ ಹೊತೆಗೆ ಮಠ ಇರುತ್ತದೆ ಎಂದರು.
11 ವರ್ಷಗಳಿಂದಲೂ ಸತ್ಯ ಹುಡುಕುತ್ತೇವೆ ಎಂದು ನಿಂತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಜೊತೆ ಸಮಾಜ ಹಾಗೂ ಮಠ ಇದೆ. ಸೌಜನ್ಯ ಮಹಾನ್ ಶಕ್ತಿ, ಅದು ಸ್ತ್ರೀಶಕ್ತಿ, ಅದು ಕಾಳಿ ಸ್ವರೂಪ ಪಡೆದು ಇಡೀ ರಾಜಾದ್ಯಂತ ಆವಿರ್ಭಾವ ಮಾಡುತ್ತದೆ, ಅದಕ್ಕೆ ಮೊದಲು ಸರ್ಕಾರ ಗಮನಿಸಿ ನ್ಯಾಯ ಸಿಗುವಂತೆ ಮಾಡಬೇಕು ಎಂದು ಶ್ರೀಗಳು ಒತ್ತಾಯಿಸಿದರು.
ಸೌಜನ್ಯ ಪರ ಹೋರಾಟದ ಮುಂಚೂಣಿ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅಧ್ಯಕ್ಷರಾಗಿರುವ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸಭೆ ಆಯೋಜನೆಗೊಂಡಿತ್ತು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…