Advertisement
The Rural Mirror ಫಾಲೋಅಪ್

#ಕೃಷಿಉಳಿಸಿ #ಕಾಡಾನೆದಾಳಿ | ಕಾಡಾನೆ ಓಡಿಸಲು ಲಾಟೀನು ಪ್ರಯೋಗ ಮಾಡಿದರು…!

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ. ಈಗಾಗಲೇ ಕೊಲ್ಲಮೊಗ್ರ , ಹರಿಹರ ಪ್ರದೇಶದಲ್ಲಿ ಕೃಷಿಕರ ಮೇಲೂ ದಾಳಿ ಆರಂಭಿಸಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳೂ ಅನಿವಾರ್ಯ. ಇಲಾಖೆಗಳು ತಮ್ಮದೇ ಪ್ರಯತ್ನ ಮಾಡುತ್ತಿವೆ. ಈ ನಡುವೆ ಆನೆ ಓಡಿಸಲು ಕೃಷಿಕರಿಂದ  ಏನೇನು ಪ್ರಯತ್ನಗಳಾಗಿವೆ ಎಂದು ರೂರಲ್‌ ಮಿರರ್‌.com ಪರಿಚಯಿಸುತ್ತಾ ಮುಂದೇನು ಮಾಡಬಹುದು ಎಂಬುದರ ಬಗ್ಗೆ ವಿವರವಾದ ಅಧ್ಯಯನ ವರದಿ ಮಾಡುತ್ತಿದೆ. ಕೃಷಿಕರೂ ತಮ್ಮ ಅಭಿಪ್ರಾಯ ತಿಳಿಸಬಹುದು.

Advertisement
Advertisement

ಸುಮಾರು 15-20 ವರ್ಷಗಳಿಂದಲೇ ಕಾಡಾನೆ ಕಾಟ ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಹರಿಹರ ಪ್ರದೇಶದಲ್ಲಿ ಇದೆ. ಆರಂಭದಲ್ಲಿ ಕೃಷಿಗೆ ಸಣ್ಣ ಪ್ರಮಾಣದಲ್ಲಿ ಹಾನಿ ಮಾಡುತ್ತಿದ್ದ ಕಾಡಾನೆಗಳ ಹಿಂಡು ಕ್ರಮೇಣವಾಗಿ ಅಡಿಕೆ, ಬಾಳೆ , ತೆಂಗು ನಾಶ ಮಾಡಿತು. ಒಮ್ಮೆ ಕೃಷಿ ಹಾನಿಗೊಳಗಾದರೆ ಮತ್ತೆ ಕೃಷಿ ಮರುಸೃಷ್ಟಿಗೆ ದಶಕಗಳೇ ಬೇಕಾಗುತ್ತದೆ. ಒಬ್ಬ ವ್ಯಕ್ತಿಯ ಬದುಕಿನ ಅತೀ ಮುಖ್ಯ ಕಾಲಘಟ್ಟವು ಕೃಷಿ ಅಭಿವೃದ್ಧಿಗೆ ಬೇಕಾಗುತ್ತದೆ. ಆದರೆ ಈ ಶ್ರಮವೆಲ್ಲಾ ಕಾಡಾನೆಗೆ ಒಂದು ದಿನದಲ್ಲಿ ಹಾಳು ಮಾಡಲು ಸಾಕಾಗುತ್ತದೆ. ಹೀಗಾಗಿ ಕೃಷಿಕನ ಬೆವರ ಶ್ರಮ ಉಳಿಸಲು ಕಾಡಾನೆ ಹಾವಳಿಯಿಂದ ತಪ್ಪಿಸಲು ಹರಿಹರ, ಕೊಲ್ಲಮೊಗ್ರ ಪ್ರದೇಶದಲ್ಲಿ ಆರಂಭದಲ್ಲಿ ರಾತ್ರಿ ಇಡೀ ಜಾಗರಣೆ ಮಾಡಿದವರು ಇದ್ದಾರೆ. ಇನ್ನೂ ಕೆಲವರು ಆರಂಭದಲ್ಲಿ ರಾತ್ರಿ ದೀಪ ಬೆಳಗಿಸಿ ಕೆಲ ಸಮಯ ಪರಿಹಾರ ಕಂಡುಕೊಂಡರು.

ತಮ್ಮ ಕೃಷಿ ಭೂಮಿಯ ಸುತ್ತಲು ಚಿಮಣಿ ದೀಪವನ್ನು ಸಂಜೆಯ ವೇಳೆಗೆ ಉರಿಸಿ ಬರುತ್ತಿದ್ದರು ಕೃಷಿಕರು. ಸಂಜೆಯ ವೇಳೆಗೆ ಕೃಷಿ ಭೂಮಿಯ ಸುತ್ತಲೂ ಇಟ್ಟಿರುವ ದೀಪಗಳನ್ನು ಉರಿಸಿ ಮರುದಿನ ಬೆಳಗಿನವರೆಗೆ ಈ ದೀಪ ಉರಿಯುವಂತೆ ಜಾಗೃತೆ ವಹಿಸುತ್ತಿದ್ದರು. ಆರಂಭದಲ್ಲಿ ಈ ಪ್ರಯೋಗ ಹೊಸದಾಗಿ ಕಂಡಾಗಿ ಕಾಡಾನೆ ತೋಟದ ಕಡೆಗೆ ಲಗ್ಗೆ ಇಡುವುದು  ಕಡಿಮೆ ಮಾಡಿತು. ಕೆಲವರು ಲಾಟೀನು ಇಡುವ ಮೂಲಕವೂ ಇದರಲ್ಲಿ ಸುಧಾರಣೆ ಮಾಡಿಕೊಂಡರು. ಲಾಟೀನು ಇಟ್ಟರೆ ಇಡೀ ರಾತ್ರಿ ಗಾಳಿಯ ರಭಸಕ್ಕೂ ನಂದತೆ ಬೆಳಗಿನವರೆಗೆ ಉರಿಯುತ್ತಿತ್ತು. ಕ್ರಮೇಣ ಈ ಪ್ರಯೋಗವೂ ಕಾಡಾನೆಗೆ ಅಭ್ಯಾಸವಾಗಿ ಮತ್ತೆ ಕೃಷಿ ತೋಟಕ್ಕೆ ಹಾನಿ ಮಾಡಲು ಆರಂಭಿಸಿತು. ಆಗ ಇನ್ನೊಂದು ಪ್ರಯೋಗಕ್ಕೆ ಮುಂದಾದರು. ಅಷ್ಟರಲ್ಲಿ ಅದುವರೆಗೂ ಕೃಷಿ ಭೂಮಿಯೊಳಗೆ ಇಳಿದಿದ್ದ ಬೆವರ ಹನಿ ಒಣಗಿತು.  ಮುಂದೇನು ಪ್ರಯೋಗ ಮಾಡಿದರು…. ? ಇನ್ನೊಂದು ಭಾಗದಲ್ಲಿ ತಿಳಿಸುತ್ತೇವೆ.

ಇಂತಹ ಪ್ರಯೋಗಗಳು ಕೃಷಿಕರು ಮಾಡಿದ್ದಿದ್ದರೆ ನಮಗೇ ಕಳುಹಿಸಿ. ಕೃಷಿಕರ ಇಂತಹ ಎಲ್ಲಾ ಪ್ರಯತ್ನಗಳನ್ನು ದಾಖಲಿಸಿ ಆ ಬಳಿಕ ಮುಂದೇನು ಪರಿಹಾರ ಮಾರ್ಗವಿದೆ ಎಂಬುದರ ಅಧ್ಯಯನ ವರದಿಯನ್ನು ದಾಖಲಿಸಿ ಸಂಬಂಧಿತರ ಮೂಲಕ ಪರಿಹಾರಕ್ಕೆ ಯತ್ನಿಸೋಣ. ನಮ್ಮ ವ್ಯಾಟ್ಸಪ್‌ ಸಂಖ್ಯೆ 9449125447 ಅಥವಾ 9448625390 – ರೂರಲ್‌ ಮಿರರ್

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಸಣ್ಣ ರೈತರಿಗೆ ಇಲ್ಲಿ ‘ಎಟಿಎಂ’ ಈ ಹಸು ! ಹಾಲಿನಲ್ಲಿ 8.4% ಕೊಬ್ಬು , ತುಪ್ಪದ ರೇಟು ಭರ್ಜರಿ..!

ಉತ್ತರಾಖಂಡದ ಸ್ಥಳೀಯ ಬದ್ರಿ ಹಸು ಇಂದು ರೈತರ ಪಾಲಿಗೆ ಹೊಸ ಆದಾಯದ ಮೂಲವಾಗಿ…

4 hours ago

ಹೊಸರುಚಿ | ಮನೆಯಲ್ಲೇ ಮಾಡಿ ‘ಪೇಪರ್ ಅವಲಕ್ಕಿ ಚೂಡಾ’

ಪೇಪರ್ ಅವಲಕ್ಕಿ ಚೂಡಾಕ್ಕೆ ಬೇಕಾಗುವ ಸಾಮಗ್ರಿಗಳು : ಪೇಪರ್ ಅವಲಕ್ಕಿ – ಅಗತ್ಯ…

5 hours ago

ಅಸ್ಸಾಂ ಗಡಿಯಲ್ಲೇ ಅಡಿಕೆ ಹಬ್…! 30,000 ಹೆಕ್ಟೇರ್ ಅಡಿಕೆ ಕೃಷಿಗೆ ಬಲ – ಮಿಜೋರಾಂ ಸಿಎಂ ಉದ್ಘಾಟಿಸಿದ ಹೊಸ ಘಟಕ

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಶುಕ್ರವಾರ ಅಸ್ಸಾಂ ಗಡಿಯ ಬಳಿಯ ಮಿಜೋರಾಂನ ಕೊಲಾಸಿಬ್…

5 hours ago

ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…

12 hours ago

ಆಯುಷ್ಮಾನ್ ಚಿಕಿತ್ಸೆ ನಿರಾಕರಿಸುವಂತಿಲ್ಲ‌ | ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ಡಿಹೆಚ್ಒ ಖಡಕ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ…

20 hours ago

ಕೇಂದ್ರ ಬಜೆಟ್‌ಗೆ ಕ್ಷಣಗಣನೆ | ರಾಜ್ಯದಲ್ಲಿ ಬಜೆಟ್ ನಿರೀಕ್ಷೆ ಹೆಚ್ಚಳ; MSME ಕ್ಷೇತ್ರಕ್ಕೆ ಬೆಂಬಲ ಬೇಕು

ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ…

20 hours ago