ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ. ಈಗಾಗಲೇ ಕೊಲ್ಲಮೊಗ್ರ , ಹರಿಹರ ಪ್ರದೇಶದಲ್ಲಿ ಕೃಷಿಕರ ಮೇಲೂ ದಾಳಿ ಆರಂಭಿಸಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳೂ ಅನಿವಾರ್ಯ. ಇಲಾಖೆಗಳು ತಮ್ಮದೇ ಪ್ರಯತ್ನ ಮಾಡುತ್ತಿವೆ. ಈ ನಡುವೆ ಆನೆ ಓಡಿಸಲು ಕೃಷಿಕರಿಂದ ಏನೇನು ಪ್ರಯತ್ನಗಳಾಗಿವೆ ಎಂದು ರೂರಲ್ ಮಿರರ್.com ಪರಿಚಯಿಸುತ್ತಾ ಮುಂದೇನು ಮಾಡಬಹುದು ಎಂಬುದರ ಬಗ್ಗೆ ವಿವರವಾದ ಅಧ್ಯಯನ ವರದಿ ಮಾಡುತ್ತಿದೆ. ಕೃಷಿಕರೂ ತಮ್ಮ ಅಭಿಪ್ರಾಯ ತಿಳಿಸಬಹುದು.
ಸುಮಾರು 15-20 ವರ್ಷಗಳಿಂದಲೇ ಕಾಡಾನೆ ಕಾಟ ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಹರಿಹರ ಪ್ರದೇಶದಲ್ಲಿ ಇದೆ. ಆರಂಭದಲ್ಲಿ ಕೃಷಿಗೆ ಸಣ್ಣ ಪ್ರಮಾಣದಲ್ಲಿ ಹಾನಿ ಮಾಡುತ್ತಿದ್ದ ಕಾಡಾನೆಗಳ ಹಿಂಡು ಕ್ರಮೇಣವಾಗಿ ಅಡಿಕೆ, ಬಾಳೆ , ತೆಂಗು ನಾಶ ಮಾಡಿತು. ಒಮ್ಮೆ ಕೃಷಿ ಹಾನಿಗೊಳಗಾದರೆ ಮತ್ತೆ ಕೃಷಿ ಮರುಸೃಷ್ಟಿಗೆ ದಶಕಗಳೇ ಬೇಕಾಗುತ್ತದೆ. ಒಬ್ಬ ವ್ಯಕ್ತಿಯ ಬದುಕಿನ ಅತೀ ಮುಖ್ಯ ಕಾಲಘಟ್ಟವು ಕೃಷಿ ಅಭಿವೃದ್ಧಿಗೆ ಬೇಕಾಗುತ್ತದೆ. ಆದರೆ ಈ ಶ್ರಮವೆಲ್ಲಾ ಕಾಡಾನೆಗೆ ಒಂದು ದಿನದಲ್ಲಿ ಹಾಳು ಮಾಡಲು ಸಾಕಾಗುತ್ತದೆ. ಹೀಗಾಗಿ ಕೃಷಿಕನ ಬೆವರ ಶ್ರಮ ಉಳಿಸಲು ಕಾಡಾನೆ ಹಾವಳಿಯಿಂದ ತಪ್ಪಿಸಲು ಹರಿಹರ, ಕೊಲ್ಲಮೊಗ್ರ ಪ್ರದೇಶದಲ್ಲಿ ಆರಂಭದಲ್ಲಿ ರಾತ್ರಿ ಇಡೀ ಜಾಗರಣೆ ಮಾಡಿದವರು ಇದ್ದಾರೆ. ಇನ್ನೂ ಕೆಲವರು ಆರಂಭದಲ್ಲಿ ರಾತ್ರಿ ದೀಪ ಬೆಳಗಿಸಿ ಕೆಲ ಸಮಯ ಪರಿಹಾರ ಕಂಡುಕೊಂಡರು.
ತಮ್ಮ ಕೃಷಿ ಭೂಮಿಯ ಸುತ್ತಲು ಚಿಮಣಿ ದೀಪವನ್ನು ಸಂಜೆಯ ವೇಳೆಗೆ ಉರಿಸಿ ಬರುತ್ತಿದ್ದರು ಕೃಷಿಕರು. ಸಂಜೆಯ ವೇಳೆಗೆ ಕೃಷಿ ಭೂಮಿಯ ಸುತ್ತಲೂ ಇಟ್ಟಿರುವ ದೀಪಗಳನ್ನು ಉರಿಸಿ ಮರುದಿನ ಬೆಳಗಿನವರೆಗೆ ಈ ದೀಪ ಉರಿಯುವಂತೆ ಜಾಗೃತೆ ವಹಿಸುತ್ತಿದ್ದರು. ಆರಂಭದಲ್ಲಿ ಈ ಪ್ರಯೋಗ ಹೊಸದಾಗಿ ಕಂಡಾಗಿ ಕಾಡಾನೆ ತೋಟದ ಕಡೆಗೆ ಲಗ್ಗೆ ಇಡುವುದು ಕಡಿಮೆ ಮಾಡಿತು. ಕೆಲವರು ಲಾಟೀನು ಇಡುವ ಮೂಲಕವೂ ಇದರಲ್ಲಿ ಸುಧಾರಣೆ ಮಾಡಿಕೊಂಡರು. ಲಾಟೀನು ಇಟ್ಟರೆ ಇಡೀ ರಾತ್ರಿ ಗಾಳಿಯ ರಭಸಕ್ಕೂ ನಂದತೆ ಬೆಳಗಿನವರೆಗೆ ಉರಿಯುತ್ತಿತ್ತು. ಕ್ರಮೇಣ ಈ ಪ್ರಯೋಗವೂ ಕಾಡಾನೆಗೆ ಅಭ್ಯಾಸವಾಗಿ ಮತ್ತೆ ಕೃಷಿ ತೋಟಕ್ಕೆ ಹಾನಿ ಮಾಡಲು ಆರಂಭಿಸಿತು. ಆಗ ಇನ್ನೊಂದು ಪ್ರಯೋಗಕ್ಕೆ ಮುಂದಾದರು. ಅಷ್ಟರಲ್ಲಿ ಅದುವರೆಗೂ ಕೃಷಿ ಭೂಮಿಯೊಳಗೆ ಇಳಿದಿದ್ದ ಬೆವರ ಹನಿ ಒಣಗಿತು. ಮುಂದೇನು ಪ್ರಯೋಗ ಮಾಡಿದರು…. ? ಇನ್ನೊಂದು ಭಾಗದಲ್ಲಿ ತಿಳಿಸುತ್ತೇವೆ.
ಇಂತಹ ಪ್ರಯೋಗಗಳು ಕೃಷಿಕರು ಮಾಡಿದ್ದಿದ್ದರೆ ನಮಗೇ ಕಳುಹಿಸಿ. ಕೃಷಿಕರ ಇಂತಹ ಎಲ್ಲಾ ಪ್ರಯತ್ನಗಳನ್ನು ದಾಖಲಿಸಿ ಆ ಬಳಿಕ ಮುಂದೇನು ಪರಿಹಾರ ಮಾರ್ಗವಿದೆ ಎಂಬುದರ ಅಧ್ಯಯನ ವರದಿಯನ್ನು ದಾಖಲಿಸಿ ಸಂಬಂಧಿತರ ಮೂಲಕ ಪರಿಹಾರಕ್ಕೆ ಯತ್ನಿಸೋಣ. ನಮ್ಮ ವ್ಯಾಟ್ಸಪ್ ಸಂಖ್ಯೆ 9449125447 ಅಥವಾ 9448625390 – ರೂರಲ್ ಮಿರರ್
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…