ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನಲ್ಲಿ ಕರೆ ನೀಡಿರುವುದು ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಬಾದಾಮಿ ತಾಲೂಕಿನ ಬೇಲೂರು ಗ್ರಾಮದಲ್ಲಿ ಮನ್ ಕಿ ಬಾತ್ ಆಲಿಸಿ ಮಾತನಾಡಿದ ಅವರು, ಮಕ್ಕಳು ಗುಬ್ಬಚ್ಚಿ ಭಾವಚಿತ್ರವನ್ನು ವೀಡಿಯೊದಲ್ಲಿ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಬ್ಬಚ್ಚಿಗಳ ರಕ್ಷಣೆಗೆ ಕರೆ ನೀಡಿರುವುದು ದೇಶವಾಸಿಗಳಿಗೆ ಸ್ಫೂರ್ತಿಯಾಗಿದೆ ಎಂದರು. ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಬ್ಬಚ್ಚಿ ಅಳಿವಿನಂಚಿಗೆ ತಲುಪಿವೆ. ಇಂತಹ ಪಕ್ಷಿ ಸಂತತಿಯನ್ನು ರಕ್ಷಿಸಲು ಚೆನ್ನೈನ ಕುಡುಗಲ್ ಟ್ರಸ್ಟ್ ತಮ್ಮ ಮಕ್ಕಳ ಮುಖಾಂತರ ಗುಬ್ಬಚ್ಚಿ ಉಳಿವಿಗೆ ಮುಂದಾಗಿರುವುದು ಇಡೀ ದೇಶವೇ ಹೆಮ್ಮೆ ಪಡುವ ಸಂಗತಿ ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel