The Rural Mirror ಕಾಳಜಿ

ಬನ್ನಿ….ಪಾಲ್ಗೊಳ್ಳಿ…..‌ದೇಶದ ಮುಕುಟ ಲಡಾಖ್ ರಕ್ಷಣೆಗೆ ಕೈಜೋಡಿಸಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದ ಮುಕುಟಮಣಿಯಂತಿರುವ ಲಡಾಖ್(save Ladakh) ರಕ್ಷಣೆಗೆ ಖ್ಯಾತ ಪರಿಸರವಾದಿ(social reformist) ಸೋನಮ್ ವಾಂಗ್ಚುಕ್(Sonam Wangchuk) ನೇತೃತ್ವದಲ್ಲಿ ನಡೆಯುತ್ತಿರುವ ಕಠಿಣ ಉಪವಾಸ ಸತ್ಯಾಗ್ರಹಕ್ಕೆ(climate fast) ಬೆಂಬಲ ಸೂಚಿಸೋಣ. ಮಾರ್ಚ್ 24 ರ ಭಾನುವಾರ ಶಿವಮೊಗ್ಗದಲ್ಲಿ ನಡೆಯುವ ಸಾಂಕೇತಿಕ ಉಪವಾಸ ಸತ್ಯಾಗ್ರಹದಲ್ಲಿ ಪರಿಸರಪ್ರೇಮಿಗಳು ಪಾಲ್ಗೊಳ್ಳುವುದರ ಮೂಲಕ…..

Advertisement
Advertisement

ಖ್ಯಾತ ಪರಿಸರವಾದಿ ಸೋನಂ ವಾಂಗ್ಚುಕ್ ಅವರು ಲೇಹ್ ನಗರದಲ್ಲಿ ವಿಪರೀತ ಥರಗುಟ್ಟುವ ಚಳಿ ನಡುವೆ ಕಳೆದ ಎರಡು ವಾರಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕೇಂದ್ರಾಡಳಿತ ಲಡಾಕ್ ಪ್ರದೇಶವನ್ನು ಕೈಗಾರಿಕಾ ಹಾಗೂ ಗಣಿ ಲಾಬಿಗಳಿಂದ ರಕ್ಷಿಸಲು ಸಾಂವಿಧಾನಿಕ ರೀತಿಯ ಖಾತ್ರಿ ಬಯಸಿ ಅವರು ಈ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಸ್ಥಳೀಯ ನೂರಾರು ಜನರು ಬೆಂಬಲ ನೀಡುತ್ತಿದ್ದಾರೆ.

ಲಡಾಕ್ ಪರಿಸರ ಹಾಗೂ ಅದರ ಬುಡಕಟ್ಟು ಸಂಸ್ಕೃತಿಯನ್ನು ರಕ್ಷಿಸುವುದಾಗಿ ಕೇಂದ್ರ ಸರ್ಕಾರ ವಾಗ್ದಾನ ಮಾಡಿತ್ತು. ಈ ವಾಗ್ದಾನ ನೆನಪಿಸುವುದಕ್ಕೋಸ್ಕರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮೈನಸ್ 12 ಡಿಗ್ರಿಗಿಂತಲೂ ಕಡಿಮೆ ತಾಪಮಾನದಲ್ಲಿ ಸುಮಾರು 250 ಜನರೊಂದಿಗೆ ರಾತ್ರಿ ಕಳೆಯುತ್ತಿರುವ ವಾಂಗ್ಚುಕ್, ಸರ್ಕಾರ ನೀಡಿರುವ ವಾಗ್ದಾನವನ್ನು ಈಡೇರಿಸುವಂತೆ ಒತ್ತಾಯಿಸುತ್ತಿದ್ದಾರೆ. ಮಾರ್ಚ್ ಆರರಂದು ವಾಂಗ್ಚುಕ್ ಅವರು ಮೆರವಣಿಗೆಗೆ ಚಾಲನೆ ನೀಡುವ ಮೂಲಕ ಈ ಪ್ರತಿಭಟನೆ ಆರಂಭಿಸಿದ್ದರು. ಅಂದು ಅವರು ನೂರಾರು ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಇನ್ನು ಪ್ರತಿ 21 ದಿನಗಳಂತೆ ಹಂತ ಹಂತವಾಗಿ ಈ ಸತ್ಯಾಗ್ರಹ ಮುಂದುವರಿಯುತ್ತದೆ ಎಂದು ಘೋಷಿಸಿದ್ದಾರೆ.

ಹಿಮಾಲಯ ತಪ್ಪಲಿನ ಅತಿ ಸೂಕ್ಷ್ಮವಾದ ಈ ಪ್ರದೇಶದಲ್ಲಿ ಪರಿಸರಕ್ಕೆ ಮಾರಕವಾಗುವ ಯಾವುದೇ ಕಾರ್ಯ ಚಟುವಟಿಕೆಗಳು ಇಡೀ ದೇಶದ ವಾತಾವರಣದ ಮೇಲೆ ಪರಿಣಾಮ ಬೀರುವುದರಿಂದ ನಾವೆಲ್ಲರೂ ಈ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಸಾಂಕೇತಿಕ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳೋಣ. ಮಹಾತ್ಮ ಗಾಂಧಿ ಪ್ರತಿಮೆ ಬಳಿ  ಶಿವಮೊಗ್ಗದಲ್ಲಿ.

A large number of people including women, men, children, youth, students, and prominent people of Ladakh gathered at HIAL Leh in support of Sonam Wangchuk, who has been on Climate Fast for last five days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

18 minutes ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 hour ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

3 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

11 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

13 hours ago