Advertisement
The Rural Mirror ಕಾಳಜಿ

ಬನ್ನಿ….ಪಾಲ್ಗೊಳ್ಳಿ…..‌ದೇಶದ ಮುಕುಟ ಲಡಾಖ್ ರಕ್ಷಣೆಗೆ ಕೈಜೋಡಿಸಿ

Share

ದೇಶದ ಮುಕುಟಮಣಿಯಂತಿರುವ ಲಡಾಖ್(save Ladakh) ರಕ್ಷಣೆಗೆ ಖ್ಯಾತ ಪರಿಸರವಾದಿ(social reformist) ಸೋನಮ್ ವಾಂಗ್ಚುಕ್(Sonam Wangchuk) ನೇತೃತ್ವದಲ್ಲಿ ನಡೆಯುತ್ತಿರುವ ಕಠಿಣ ಉಪವಾಸ ಸತ್ಯಾಗ್ರಹಕ್ಕೆ(climate fast) ಬೆಂಬಲ ಸೂಚಿಸೋಣ. ಮಾರ್ಚ್ 24 ರ ಭಾನುವಾರ ಶಿವಮೊಗ್ಗದಲ್ಲಿ ನಡೆಯುವ ಸಾಂಕೇತಿಕ ಉಪವಾಸ ಸತ್ಯಾಗ್ರಹದಲ್ಲಿ ಪರಿಸರಪ್ರೇಮಿಗಳು ಪಾಲ್ಗೊಳ್ಳುವುದರ ಮೂಲಕ…..

ಖ್ಯಾತ ಪರಿಸರವಾದಿ ಸೋನಂ ವಾಂಗ್ಚುಕ್ ಅವರು ಲೇಹ್ ನಗರದಲ್ಲಿ ವಿಪರೀತ ಥರಗುಟ್ಟುವ ಚಳಿ ನಡುವೆ ಕಳೆದ ಎರಡು ವಾರಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕೇಂದ್ರಾಡಳಿತ ಲಡಾಕ್ ಪ್ರದೇಶವನ್ನು ಕೈಗಾರಿಕಾ ಹಾಗೂ ಗಣಿ ಲಾಬಿಗಳಿಂದ ರಕ್ಷಿಸಲು ಸಾಂವಿಧಾನಿಕ ರೀತಿಯ ಖಾತ್ರಿ ಬಯಸಿ ಅವರು ಈ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಸ್ಥಳೀಯ ನೂರಾರು ಜನರು ಬೆಂಬಲ ನೀಡುತ್ತಿದ್ದಾರೆ.

ಲಡಾಕ್ ಪರಿಸರ ಹಾಗೂ ಅದರ ಬುಡಕಟ್ಟು ಸಂಸ್ಕೃತಿಯನ್ನು ರಕ್ಷಿಸುವುದಾಗಿ ಕೇಂದ್ರ ಸರ್ಕಾರ ವಾಗ್ದಾನ ಮಾಡಿತ್ತು. ಈ ವಾಗ್ದಾನ ನೆನಪಿಸುವುದಕ್ಕೋಸ್ಕರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮೈನಸ್ 12 ಡಿಗ್ರಿಗಿಂತಲೂ ಕಡಿಮೆ ತಾಪಮಾನದಲ್ಲಿ ಸುಮಾರು 250 ಜನರೊಂದಿಗೆ ರಾತ್ರಿ ಕಳೆಯುತ್ತಿರುವ ವಾಂಗ್ಚುಕ್, ಸರ್ಕಾರ ನೀಡಿರುವ ವಾಗ್ದಾನವನ್ನು ಈಡೇರಿಸುವಂತೆ ಒತ್ತಾಯಿಸುತ್ತಿದ್ದಾರೆ. ಮಾರ್ಚ್ ಆರರಂದು ವಾಂಗ್ಚುಕ್ ಅವರು ಮೆರವಣಿಗೆಗೆ ಚಾಲನೆ ನೀಡುವ ಮೂಲಕ ಈ ಪ್ರತಿಭಟನೆ ಆರಂಭಿಸಿದ್ದರು. ಅಂದು ಅವರು ನೂರಾರು ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಇನ್ನು ಪ್ರತಿ 21 ದಿನಗಳಂತೆ ಹಂತ ಹಂತವಾಗಿ ಈ ಸತ್ಯಾಗ್ರಹ ಮುಂದುವರಿಯುತ್ತದೆ ಎಂದು ಘೋಷಿಸಿದ್ದಾರೆ.

ಹಿಮಾಲಯ ತಪ್ಪಲಿನ ಅತಿ ಸೂಕ್ಷ್ಮವಾದ ಈ ಪ್ರದೇಶದಲ್ಲಿ ಪರಿಸರಕ್ಕೆ ಮಾರಕವಾಗುವ ಯಾವುದೇ ಕಾರ್ಯ ಚಟುವಟಿಕೆಗಳು ಇಡೀ ದೇಶದ ವಾತಾವರಣದ ಮೇಲೆ ಪರಿಣಾಮ ಬೀರುವುದರಿಂದ ನಾವೆಲ್ಲರೂ ಈ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಸಾಂಕೇತಿಕ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳೋಣ. ಮಹಾತ್ಮ ಗಾಂಧಿ ಪ್ರತಿಮೆ ಬಳಿ  ಶಿವಮೊಗ್ಗದಲ್ಲಿ.

A large number of people including women, men, children, youth, students, and prominent people of Ladakh gathered at HIAL Leh in support of Sonam Wangchuk, who has been on Climate Fast for last five days.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

9 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

9 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago