ಸಾಧಕರ ಜನ್ಮದಿನದ ಪ್ರಯುಕ್ತ ಗಿಡ ನೆಡುವಿಕೆ ಅಭಿಯಾನ

September 1, 2025
9:15 PM

ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಜನ್ಮದಿನದ ಅಂಗವಾಗಿ ಈಶ್ವರಿ ಸೋಷಿಯಲ್ ಟ್ರಸ್ಟ್ ನಿಂದ ಚಾಮರಾಜನಗರ ಜಿಲ್ಲೆ ಯಳಂದೂರು ಬಳಿಯ ಯರಿಯೂರಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಟ್ರಸ್ಟ್‌ ವತಿಯಿಂದ ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ  ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಶಾಸಕ ಎ.ಆರ್. ಕೃಷ್ಣಮೂರ್ತಿ ಈ ಯೋಜನೆಗೆ ಚಾಲನೆ ನೀಡಿದರು.

ಯೋಜನೆಗೆ ಚಾಲನೆ ನೀಡಿದ ಶಾಸಕ ಎ.ಆರ್.ಕೃಷ್ಣಮೂರ್ತಿ, ನಗರೀಕರಣ ಮತ್ತು ಆಧುನೀಕರಣದ ಭರಾಟೆಯಲ್ಲಿ ಶುದ್ಧ ಗಾಳಿ, ನೆರಳು, ನೀರು ತುಂಬ ಬೆಲೆಯುಳ್ಳ ವಸ್ತುವಾಗಿವೆ. ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಾ ಸದ್ದಿಲ್ಲದೆ ಪರಿಸರ ರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಯ ಕಾರ್ಯ ಸ್ವಾಗತಾರ್ಹವಾದದ್ದು. ಇಂತಹ ಪರಿಸರ ಪ್ರೇಮಿಗಳನ್ನು ಪ್ರೋತ್ಸಾಹಿಸುವ ಮೂಲಕ ಪರಿಸರ ರಕ್ಷಣೆಗೆ ಎಲ್ಲರೂ ತಮ್ಮ ಬದ್ಧತೆ ಪ್ರದರ್ಶಿಸಬೇಕು ಎಂದರು.

ಕಾರಾಪುರ ಮಠದ ಬಸವರಾಜ ಸ್ವಾಮಿ ಒಡೆಯರ್, ಪರಿಸರದಲ್ಲಿ ದಿನೇ ದಿನೇ ಇಂಗಾಲದ ಪರಿಣಾಮ ಹೆಚ್ಚುತ್ತಿದ್ದು, ಆಮ್ಲಜನಕ ಪ್ರಮಾಣ ಕುಸಿಯುತ್ತಿದೆ. ಭವಿಷ್ಯದಲ್ಲಿ ಇದರಿಂದ ಉಂಟಾಗುವ ತೀವ್ರತರ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಪರಿಸರ ರಕ್ಷಣೆಯೊಂದೇ ದಾರಿ ಎಂದು ತಿಳಿಸಿದರು.

ಸ್ಥಳೀಯರಾದ ಡಾ.ಶ್ರೀಕಂಠಮೂರ್ತಿ, ಯರಿಯೂರಿನಲ್ಲಿ 250 ಗಿಡಗಳನ್ನು ನೆಟ್ಟು ಗ್ರಾಮವನ್ನು ಹಸಿರುಮಯ ಮಾಡಲು ಮುಂದಾಗಿರುವ ಕ್ರಮ ಸ್ವಾಗತಾರ್ಹವಾದದ್ದು ಎಂದು ಮೆಚ್ಚುಗೆ ಸೂಚಿಸಿದರು.

ಟ್ರಸ್ಟ್ ಅಧ್ಯಕ್ಷ ಸಿ.ಎಂ.ವೆಂಕಟೇಶ್, ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಟ್ರಸ್ಟ್, ಪರಿಸರ ರಕ್ಷಣೆಗೆ ತನ್ನದೇ ಆದ ಅಳಿಲು ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror