Advertisement
MIRROR FOCUS

ಸಾಧಕರ ಜನ್ಮದಿನದ ಪ್ರಯುಕ್ತ ಗಿಡ ನೆಡುವಿಕೆ ಅಭಿಯಾನ

Share

ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಜನ್ಮದಿನದ ಅಂಗವಾಗಿ ಈಶ್ವರಿ ಸೋಷಿಯಲ್ ಟ್ರಸ್ಟ್ ನಿಂದ ಚಾಮರಾಜನಗರ ಜಿಲ್ಲೆ ಯಳಂದೂರು ಬಳಿಯ ಯರಿಯೂರಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಟ್ರಸ್ಟ್‌ ವತಿಯಿಂದ ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ  ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಶಾಸಕ ಎ.ಆರ್. ಕೃಷ್ಣಮೂರ್ತಿ ಈ ಯೋಜನೆಗೆ ಚಾಲನೆ ನೀಡಿದರು.

ಯೋಜನೆಗೆ ಚಾಲನೆ ನೀಡಿದ ಶಾಸಕ ಎ.ಆರ್.ಕೃಷ್ಣಮೂರ್ತಿ, ನಗರೀಕರಣ ಮತ್ತು ಆಧುನೀಕರಣದ ಭರಾಟೆಯಲ್ಲಿ ಶುದ್ಧ ಗಾಳಿ, ನೆರಳು, ನೀರು ತುಂಬ ಬೆಲೆಯುಳ್ಳ ವಸ್ತುವಾಗಿವೆ. ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಾ ಸದ್ದಿಲ್ಲದೆ ಪರಿಸರ ರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಯ ಕಾರ್ಯ ಸ್ವಾಗತಾರ್ಹವಾದದ್ದು. ಇಂತಹ ಪರಿಸರ ಪ್ರೇಮಿಗಳನ್ನು ಪ್ರೋತ್ಸಾಹಿಸುವ ಮೂಲಕ ಪರಿಸರ ರಕ್ಷಣೆಗೆ ಎಲ್ಲರೂ ತಮ್ಮ ಬದ್ಧತೆ ಪ್ರದರ್ಶಿಸಬೇಕು ಎಂದರು.

ಕಾರಾಪುರ ಮಠದ ಬಸವರಾಜ ಸ್ವಾಮಿ ಒಡೆಯರ್, ಪರಿಸರದಲ್ಲಿ ದಿನೇ ದಿನೇ ಇಂಗಾಲದ ಪರಿಣಾಮ ಹೆಚ್ಚುತ್ತಿದ್ದು, ಆಮ್ಲಜನಕ ಪ್ರಮಾಣ ಕುಸಿಯುತ್ತಿದೆ. ಭವಿಷ್ಯದಲ್ಲಿ ಇದರಿಂದ ಉಂಟಾಗುವ ತೀವ್ರತರ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಪರಿಸರ ರಕ್ಷಣೆಯೊಂದೇ ದಾರಿ ಎಂದು ತಿಳಿಸಿದರು.

ಸ್ಥಳೀಯರಾದ ಡಾ.ಶ್ರೀಕಂಠಮೂರ್ತಿ, ಯರಿಯೂರಿನಲ್ಲಿ 250 ಗಿಡಗಳನ್ನು ನೆಟ್ಟು ಗ್ರಾಮವನ್ನು ಹಸಿರುಮಯ ಮಾಡಲು ಮುಂದಾಗಿರುವ ಕ್ರಮ ಸ್ವಾಗತಾರ್ಹವಾದದ್ದು ಎಂದು ಮೆಚ್ಚುಗೆ ಸೂಚಿಸಿದರು.

ಟ್ರಸ್ಟ್ ಅಧ್ಯಕ್ಷ ಸಿ.ಎಂ.ವೆಂಕಟೇಶ್, ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಟ್ರಸ್ಟ್, ಪರಿಸರ ರಕ್ಷಣೆಗೆ ತನ್ನದೇ ಆದ ಅಳಿಲು ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

2 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

12 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

24 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago