Advertisement
MIRROR FOCUS

ಸಾಧಕರ ಜನ್ಮದಿನದ ಪ್ರಯುಕ್ತ ಗಿಡ ನೆಡುವಿಕೆ ಅಭಿಯಾನ

Share

ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಜನ್ಮದಿನದ ಅಂಗವಾಗಿ ಈಶ್ವರಿ ಸೋಷಿಯಲ್ ಟ್ರಸ್ಟ್ ನಿಂದ ಚಾಮರಾಜನಗರ ಜಿಲ್ಲೆ ಯಳಂದೂರು ಬಳಿಯ ಯರಿಯೂರಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಟ್ರಸ್ಟ್‌ ವತಿಯಿಂದ ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ  ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಶಾಸಕ ಎ.ಆರ್. ಕೃಷ್ಣಮೂರ್ತಿ ಈ ಯೋಜನೆಗೆ ಚಾಲನೆ ನೀಡಿದರು.

ಯೋಜನೆಗೆ ಚಾಲನೆ ನೀಡಿದ ಶಾಸಕ ಎ.ಆರ್.ಕೃಷ್ಣಮೂರ್ತಿ, ನಗರೀಕರಣ ಮತ್ತು ಆಧುನೀಕರಣದ ಭರಾಟೆಯಲ್ಲಿ ಶುದ್ಧ ಗಾಳಿ, ನೆರಳು, ನೀರು ತುಂಬ ಬೆಲೆಯುಳ್ಳ ವಸ್ತುವಾಗಿವೆ. ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಾ ಸದ್ದಿಲ್ಲದೆ ಪರಿಸರ ರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಯ ಕಾರ್ಯ ಸ್ವಾಗತಾರ್ಹವಾದದ್ದು. ಇಂತಹ ಪರಿಸರ ಪ್ರೇಮಿಗಳನ್ನು ಪ್ರೋತ್ಸಾಹಿಸುವ ಮೂಲಕ ಪರಿಸರ ರಕ್ಷಣೆಗೆ ಎಲ್ಲರೂ ತಮ್ಮ ಬದ್ಧತೆ ಪ್ರದರ್ಶಿಸಬೇಕು ಎಂದರು.

ಕಾರಾಪುರ ಮಠದ ಬಸವರಾಜ ಸ್ವಾಮಿ ಒಡೆಯರ್, ಪರಿಸರದಲ್ಲಿ ದಿನೇ ದಿನೇ ಇಂಗಾಲದ ಪರಿಣಾಮ ಹೆಚ್ಚುತ್ತಿದ್ದು, ಆಮ್ಲಜನಕ ಪ್ರಮಾಣ ಕುಸಿಯುತ್ತಿದೆ. ಭವಿಷ್ಯದಲ್ಲಿ ಇದರಿಂದ ಉಂಟಾಗುವ ತೀವ್ರತರ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಪರಿಸರ ರಕ್ಷಣೆಯೊಂದೇ ದಾರಿ ಎಂದು ತಿಳಿಸಿದರು.

ಸ್ಥಳೀಯರಾದ ಡಾ.ಶ್ರೀಕಂಠಮೂರ್ತಿ, ಯರಿಯೂರಿನಲ್ಲಿ 250 ಗಿಡಗಳನ್ನು ನೆಟ್ಟು ಗ್ರಾಮವನ್ನು ಹಸಿರುಮಯ ಮಾಡಲು ಮುಂದಾಗಿರುವ ಕ್ರಮ ಸ್ವಾಗತಾರ್ಹವಾದದ್ದು ಎಂದು ಮೆಚ್ಚುಗೆ ಸೂಚಿಸಿದರು.

ಟ್ರಸ್ಟ್ ಅಧ್ಯಕ್ಷ ಸಿ.ಎಂ.ವೆಂಕಟೇಶ್, ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಟ್ರಸ್ಟ್, ಪರಿಸರ ರಕ್ಷಣೆಗೆ ತನ್ನದೇ ಆದ ಅಳಿಲು ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

23 minutes ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

50 minutes ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

23 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago