Advertisement
MIRROR FOCUS

ಸಾಧಕರ ಜನ್ಮದಿನದ ಪ್ರಯುಕ್ತ ಗಿಡ ನೆಡುವಿಕೆ ಅಭಿಯಾನ

Share

ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಜನ್ಮದಿನದ ಅಂಗವಾಗಿ ಈಶ್ವರಿ ಸೋಷಿಯಲ್ ಟ್ರಸ್ಟ್ ನಿಂದ ಚಾಮರಾಜನಗರ ಜಿಲ್ಲೆ ಯಳಂದೂರು ಬಳಿಯ ಯರಿಯೂರಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಟ್ರಸ್ಟ್‌ ವತಿಯಿಂದ ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ  ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಶಾಸಕ ಎ.ಆರ್. ಕೃಷ್ಣಮೂರ್ತಿ ಈ ಯೋಜನೆಗೆ ಚಾಲನೆ ನೀಡಿದರು.

ಯೋಜನೆಗೆ ಚಾಲನೆ ನೀಡಿದ ಶಾಸಕ ಎ.ಆರ್.ಕೃಷ್ಣಮೂರ್ತಿ, ನಗರೀಕರಣ ಮತ್ತು ಆಧುನೀಕರಣದ ಭರಾಟೆಯಲ್ಲಿ ಶುದ್ಧ ಗಾಳಿ, ನೆರಳು, ನೀರು ತುಂಬ ಬೆಲೆಯುಳ್ಳ ವಸ್ತುವಾಗಿವೆ. ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಾ ಸದ್ದಿಲ್ಲದೆ ಪರಿಸರ ರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಯ ಕಾರ್ಯ ಸ್ವಾಗತಾರ್ಹವಾದದ್ದು. ಇಂತಹ ಪರಿಸರ ಪ್ರೇಮಿಗಳನ್ನು ಪ್ರೋತ್ಸಾಹಿಸುವ ಮೂಲಕ ಪರಿಸರ ರಕ್ಷಣೆಗೆ ಎಲ್ಲರೂ ತಮ್ಮ ಬದ್ಧತೆ ಪ್ರದರ್ಶಿಸಬೇಕು ಎಂದರು.

ಕಾರಾಪುರ ಮಠದ ಬಸವರಾಜ ಸ್ವಾಮಿ ಒಡೆಯರ್, ಪರಿಸರದಲ್ಲಿ ದಿನೇ ದಿನೇ ಇಂಗಾಲದ ಪರಿಣಾಮ ಹೆಚ್ಚುತ್ತಿದ್ದು, ಆಮ್ಲಜನಕ ಪ್ರಮಾಣ ಕುಸಿಯುತ್ತಿದೆ. ಭವಿಷ್ಯದಲ್ಲಿ ಇದರಿಂದ ಉಂಟಾಗುವ ತೀವ್ರತರ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಪರಿಸರ ರಕ್ಷಣೆಯೊಂದೇ ದಾರಿ ಎಂದು ತಿಳಿಸಿದರು.

ಸ್ಥಳೀಯರಾದ ಡಾ.ಶ್ರೀಕಂಠಮೂರ್ತಿ, ಯರಿಯೂರಿನಲ್ಲಿ 250 ಗಿಡಗಳನ್ನು ನೆಟ್ಟು ಗ್ರಾಮವನ್ನು ಹಸಿರುಮಯ ಮಾಡಲು ಮುಂದಾಗಿರುವ ಕ್ರಮ ಸ್ವಾಗತಾರ್ಹವಾದದ್ದು ಎಂದು ಮೆಚ್ಚುಗೆ ಸೂಚಿಸಿದರು.

ಟ್ರಸ್ಟ್ ಅಧ್ಯಕ್ಷ ಸಿ.ಎಂ.ವೆಂಕಟೇಶ್, ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಟ್ರಸ್ಟ್, ಪರಿಸರ ರಕ್ಷಣೆಗೆ ತನ್ನದೇ ಆದ ಅಳಿಲು ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

8 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

8 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

18 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

19 hours ago