ಸುದ್ದಿಗಳು

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ ಪ್ರಕೃತಿಯ ಉಳಿವಿನ ಚಿತ್ರ ಬಿಡಿಸುತ್ತಿರುವ ಚಿಣ್ಣರ ಕಲವರಕ್ಕೆ  ಬೆಂಗಳೂರಿನ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ -CPRI ಸಾಕ್ಷಿಯಾಯಿತು. ಕೇಂದ್ರ ಇಂಧನ ಸಚಿವಾಲಯದ ವತಿಯಿಂದ ನಡೆದ ಇಂಧನ ಉಳಿತಾಯ ವಿಷಯದ ಕುರಿತ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡರು. 

Advertisement
Advertisement

ಶಾಲಾ ಮಕ್ಕಳಿಗಾಗಿ ದೇಶಾದ್ಯಂತ ಇಂಧನ ಉಳಿತಾಯ, ಪರಿಸರ ಸಂರಕ್ಷಣೆಯ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ಶಾಲೆಗಳ ವಿದ್ಯಾರ್ಥಿಗಳು ಶಾಲಾ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ ಅತ್ಯುತ್ತಮವಾಗಿ ಇಂಧನ ಉಳಿತಾಯದ ಕುರಿತ ಚಿತ್ರಗಳನ್ನು ಬಿಡಿಸಿದ ವಿದ್ಯಾರ್ಥಿಗಳನ್ನು ಆಯ್ಕೆ ರಾಜ್ಯ ಮಟ್ಟದ ಸ್ಪರ್ಧೆ ನಡೆಸಲಾಗುತ್ತಿದೆ, ಇಂಧನ ಉಳಿವಿನ ಅಗತ್ಯತೆಯ ಇಂದಿನ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎನ್ನುತ್ತಾರೆ ಕಾರ್‍ಯಕ್ರಮದ ಸಮನ್ವಯಾಧಿಕಾರಿ ಸೂರ್ಯ ನಾರಾಯಣ.

ಸ್ಪರ್ಧೆಯಲ್ಲಿ ಸಾಕಷ್ಟು ವಿಷಯಗಳನ್ನು ಕಲಿಯಲು ಸಾಧ್ಯವಾಯಿತು. ವಿದ್ಯುತ್ ವ್ಯರ್ಥ ಮಾಡಬಾರದು, ಸೌರಶಕ್ತಿಯ ಬಳಕೆಯೂ ಸೇರಿದಂತೆ ಪರಿಸರದ ಕುರಿತ ಹಲವು ಸಂಗತಿಗಳನ್ನು ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳಲು ಸಹಕಾರಿಯಾಯಿತು ಎನ್ನುತ್ತಾರೆ ವಿದ್ಯಾರ್ಥಿನಿ ಅಕ್ಷರಾ.

ಜೈವಿಕ ಇಂಧನ, ಸೌರ ಶಕ್ತಿ, ಗಾಳಿ ಶಕ್ತಿಯ ಬಳಕೆ ಕುರಿತಂತೆ ಹಲವು ವಿಚಾರಗಳು ಈ ಸ್ಪರ್ಧೆಯಿಂದ ಅರಿಯಲು ನೆರವಾಯಿತು ಎಂದು ಪೋಷಕರಾದ ಸುಮಾ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

5 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

5 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

6 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

6 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

6 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

6 hours ago