ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ ಪ್ರಕೃತಿಯ ಉಳಿವಿನ ಚಿತ್ರ ಬಿಡಿಸುತ್ತಿರುವ ಚಿಣ್ಣರ ಕಲವರಕ್ಕೆ ಬೆಂಗಳೂರಿನ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ -CPRI ಸಾಕ್ಷಿಯಾಯಿತು. ಕೇಂದ್ರ ಇಂಧನ ಸಚಿವಾಲಯದ ವತಿಯಿಂದ ನಡೆದ ಇಂಧನ ಉಳಿತಾಯ ವಿಷಯದ ಕುರಿತ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡರು.
ಶಾಲಾ ಮಕ್ಕಳಿಗಾಗಿ ದೇಶಾದ್ಯಂತ ಇಂಧನ ಉಳಿತಾಯ, ಪರಿಸರ ಸಂರಕ್ಷಣೆಯ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ಶಾಲೆಗಳ ವಿದ್ಯಾರ್ಥಿಗಳು ಶಾಲಾ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ ಅತ್ಯುತ್ತಮವಾಗಿ ಇಂಧನ ಉಳಿತಾಯದ ಕುರಿತ ಚಿತ್ರಗಳನ್ನು ಬಿಡಿಸಿದ ವಿದ್ಯಾರ್ಥಿಗಳನ್ನು ಆಯ್ಕೆ ರಾಜ್ಯ ಮಟ್ಟದ ಸ್ಪರ್ಧೆ ನಡೆಸಲಾಗುತ್ತಿದೆ, ಇಂಧನ ಉಳಿವಿನ ಅಗತ್ಯತೆಯ ಇಂದಿನ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎನ್ನುತ್ತಾರೆ ಕಾರ್ಯಕ್ರಮದ ಸಮನ್ವಯಾಧಿಕಾರಿ ಸೂರ್ಯ ನಾರಾಯಣ.
ಸ್ಪರ್ಧೆಯಲ್ಲಿ ಸಾಕಷ್ಟು ವಿಷಯಗಳನ್ನು ಕಲಿಯಲು ಸಾಧ್ಯವಾಯಿತು. ವಿದ್ಯುತ್ ವ್ಯರ್ಥ ಮಾಡಬಾರದು, ಸೌರಶಕ್ತಿಯ ಬಳಕೆಯೂ ಸೇರಿದಂತೆ ಪರಿಸರದ ಕುರಿತ ಹಲವು ಸಂಗತಿಗಳನ್ನು ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳಲು ಸಹಕಾರಿಯಾಯಿತು ಎನ್ನುತ್ತಾರೆ ವಿದ್ಯಾರ್ಥಿನಿ ಅಕ್ಷರಾ.
ಜೈವಿಕ ಇಂಧನ, ಸೌರ ಶಕ್ತಿ, ಗಾಳಿ ಶಕ್ತಿಯ ಬಳಕೆ ಕುರಿತಂತೆ ಹಲವು ವಿಚಾರಗಳು ಈ ಸ್ಪರ್ಧೆಯಿಂದ ಅರಿಯಲು ನೆರವಾಯಿತು ಎಂದು ಪೋಷಕರಾದ ಸುಮಾ ಹೇಳುತ್ತಾರೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…