ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ ಪ್ರಕೃತಿಯ ಉಳಿವಿನ ಚಿತ್ರ ಬಿಡಿಸುತ್ತಿರುವ ಚಿಣ್ಣರ ಕಲವರಕ್ಕೆ ಬೆಂಗಳೂರಿನ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ -CPRI ಸಾಕ್ಷಿಯಾಯಿತು. ಕೇಂದ್ರ ಇಂಧನ ಸಚಿವಾಲಯದ ವತಿಯಿಂದ ನಡೆದ ಇಂಧನ ಉಳಿತಾಯ ವಿಷಯದ ಕುರಿತ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡರು.
ಶಾಲಾ ಮಕ್ಕಳಿಗಾಗಿ ದೇಶಾದ್ಯಂತ ಇಂಧನ ಉಳಿತಾಯ, ಪರಿಸರ ಸಂರಕ್ಷಣೆಯ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ಶಾಲೆಗಳ ವಿದ್ಯಾರ್ಥಿಗಳು ಶಾಲಾ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ ಅತ್ಯುತ್ತಮವಾಗಿ ಇಂಧನ ಉಳಿತಾಯದ ಕುರಿತ ಚಿತ್ರಗಳನ್ನು ಬಿಡಿಸಿದ ವಿದ್ಯಾರ್ಥಿಗಳನ್ನು ಆಯ್ಕೆ ರಾಜ್ಯ ಮಟ್ಟದ ಸ್ಪರ್ಧೆ ನಡೆಸಲಾಗುತ್ತಿದೆ, ಇಂಧನ ಉಳಿವಿನ ಅಗತ್ಯತೆಯ ಇಂದಿನ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎನ್ನುತ್ತಾರೆ ಕಾರ್ಯಕ್ರಮದ ಸಮನ್ವಯಾಧಿಕಾರಿ ಸೂರ್ಯ ನಾರಾಯಣ.
ಸ್ಪರ್ಧೆಯಲ್ಲಿ ಸಾಕಷ್ಟು ವಿಷಯಗಳನ್ನು ಕಲಿಯಲು ಸಾಧ್ಯವಾಯಿತು. ವಿದ್ಯುತ್ ವ್ಯರ್ಥ ಮಾಡಬಾರದು, ಸೌರಶಕ್ತಿಯ ಬಳಕೆಯೂ ಸೇರಿದಂತೆ ಪರಿಸರದ ಕುರಿತ ಹಲವು ಸಂಗತಿಗಳನ್ನು ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳಲು ಸಹಕಾರಿಯಾಯಿತು ಎನ್ನುತ್ತಾರೆ ವಿದ್ಯಾರ್ಥಿನಿ ಅಕ್ಷರಾ.
ಜೈವಿಕ ಇಂಧನ, ಸೌರ ಶಕ್ತಿ, ಗಾಳಿ ಶಕ್ತಿಯ ಬಳಕೆ ಕುರಿತಂತೆ ಹಲವು ವಿಚಾರಗಳು ಈ ಸ್ಪರ್ಧೆಯಿಂದ ಅರಿಯಲು ನೆರವಾಯಿತು ಎಂದು ಪೋಷಕರಾದ ಸುಮಾ ಹೇಳುತ್ತಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…