ಬೇಸಿಗೆಯ ಬೇಗೆಗೆ ದಣಿದ ಪಕ್ಷಿಗಳ ನೀರಡಿಕೆ ನೀಗಿಸುವ ವಿನೂತನ ಕಾರ್ಯಕ್ಕೆ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಕೈ ಹಾಕಿದೆ. ತೆಂಗಿನಕಾಯಿಯ ಗೆರಟೆಯಲ್ಲಿ ನೀರು ತುಂಬಿಸಿ ಅದನ್ನು ಮರದ ಕೊಂಬೆಗಳಿಗೆ ಕಟ್ಟುವ ಮೂಲಕ ಹಕ್ಕಿಗಳ ದಾಹವನ್ನು ನೀಗಿಸುವ ವಿಶೇಷ ಅಭಿಯಾನ ಇದಾಗಿದೆ.
ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಮಾತನಾಡಿ, “ಬಿಸಿಲ ಝಳ ಇಡೀ ಜೀವಸಂಕುಲವನ್ನೇ ಕಾಡುತ್ತಿದೆ. ಈ ಸಂದರ್ಭದಲ್ಲಿ ಇಂತಹ ಅಭಿಯಾನವನ್ನು ಮಾಡುವ ಅವಶ್ಯಕತೆಯಿದೆ. ಇದು ಒಂದು ದಿನಕ್ಕೆ ಸೀಮಿತವಾಗಿರದೆ, ಪ್ರತೀ ದಿನವೂ ಮುಂದುವರೆಯಬೇಕು” ಎಂದರು.
ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್, ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ವಿಶೇಷ ಅಧಿಕಾರಿ ಡಾ. ಶ್ರೀಧರ್ ನಾಯ್ಕ್, ಪರೀಕ್ಷಾಂಗ ಕುಲಸಚಿವ ಡಾ. ಹೆಚ್. ಜಿ ಶ್ರೀಧರ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…