ಬೇಸಿಗೆಯ ಬೇಗೆಗೆ ದಣಿದ ಪಕ್ಷಿಗಳ ನೀರಡಿಕೆ ನೀಗಿಸುವ ವಿನೂತನ ಕಾರ್ಯಕ್ಕೆ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಕೈ ಹಾಕಿದೆ. ತೆಂಗಿನಕಾಯಿಯ ಗೆರಟೆಯಲ್ಲಿ ನೀರು ತುಂಬಿಸಿ ಅದನ್ನು ಮರದ ಕೊಂಬೆಗಳಿಗೆ ಕಟ್ಟುವ ಮೂಲಕ ಹಕ್ಕಿಗಳ ದಾಹವನ್ನು ನೀಗಿಸುವ ವಿಶೇಷ ಅಭಿಯಾನ ಇದಾಗಿದೆ.
ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಮಾತನಾಡಿ, “ಬಿಸಿಲ ಝಳ ಇಡೀ ಜೀವಸಂಕುಲವನ್ನೇ ಕಾಡುತ್ತಿದೆ. ಈ ಸಂದರ್ಭದಲ್ಲಿ ಇಂತಹ ಅಭಿಯಾನವನ್ನು ಮಾಡುವ ಅವಶ್ಯಕತೆಯಿದೆ. ಇದು ಒಂದು ದಿನಕ್ಕೆ ಸೀಮಿತವಾಗಿರದೆ, ಪ್ರತೀ ದಿನವೂ ಮುಂದುವರೆಯಬೇಕು” ಎಂದರು.
ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್, ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ವಿಶೇಷ ಅಧಿಕಾರಿ ಡಾ. ಶ್ರೀಧರ್ ನಾಯ್ಕ್, ಪರೀಕ್ಷಾಂಗ ಕುಲಸಚಿವ ಡಾ. ಹೆಚ್. ಜಿ ಶ್ರೀಧರ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…