ನೀರು ಉಳಿಸಿ ಅಭಿಯಾನ | 386432 ಘನ ಲೀಟರ್‌ ನೀರು ಸಂರಕ್ಷಣೆ |

February 17, 2025
11:20 PM
ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ.

ಕರ್ನಾಟಕ ರಾಜ್ಯದಲ್ಲಿ 12 ಬರಪೀಡಿತ ಜಿಲ್ಲೆಗಳು ಹಾಗೂ ಎರಡು ನಗರ ಪ್ರದೇಶದ ವ್ಯಾಪ್ತಿಯಲ್ಲಿ 14,80,519 ಯುವ ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳುವ ಮೂಲಕ 3,86,432ಘನ ಮೀಟರ್ ನೀರನ್ನು ಈಗಾಗಲೆ ಸಂರಕ್ಷಿಸಲಾಗಿದೆ ಯುನಿಸೆಫ್‌ನ  ಹಿರಿಯ ಅಧಿಕಾರಿ ವೆಂಕಟೇಶ್ ಅರಳಿಕಟ್ಟೆ ಹೇಳಿದರು.……… ಮುಂದೆ ಓದಿ…….

Advertisement
Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸೇವಾಸಂಸ್ಥೆಗಳ ಸಹಯೋಗದಲ್ಲಿ ರಾಜ್ಯದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಹೈದ್ರಾಬಾದ್‌ನ ಯುನಿಸೆಫ್‌ನ  ಜಂಟಿ ಆಶ್ರಯದಲ್ಲಿ ಆಯೋಜಿಸಿದ ನೀರು ಉಳಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನೀರು ಉಳಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ ಸರ್ವರ ಸಹಕಾರವನ್ನು ಅಗತ್ಯ ಎಂದರು.

ಯುನಿಸೆಫ್‌ನ ಡಾ. ಪ್ರಭಾತ್ ಮಟ್ಟಾಡಿ ಶುಭ ಹಾರೈಸಿದರು. ಎಸ್.ಡಿ.ಎಂ. ಕಾಲೇಜಿನ ಇನ್ನೂರು ವಿದ್ಯಾರ್ಥಿಗಳು ನೀರು ಉಳಿಸಿ ಜಾಥಾದಲ್ಲಿ ಭಾಗವಹಿಸಿದರು.  ಮಡಂತ್ಯಾರು ಸೇಕ್ರೆಡ್‌ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಜಲಸಂರಕ್ಷಣೆ ತಜ್ಞರಾದ ಡಾ. ಜೋಸೆಫ್, ಎನ್. ಎಂ. ನೀರುಸಂರಕ್ಷಣೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿದರು.

ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರೊ. ಮಹೇಶ್‌ಕುಮಾರ್ ಶೆಟ್ಟಿ ಮತ್ತು ಪ್ರೊ. ದೀಪಾ, ಆರ್.ಪಿ., ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾಕಿರಣ್ ಕಾರಂತ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಎಸ್.ಎಸ್. ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror