Advertisement
Opinion

ಜಲಸಂರಕ್ಷಣೆಯ ಮಾದರಿ | ತೋಡಿಗೆ ಕಟ್ಟವ ಕಟ್ಟಿ | ಜೀವಜಲವ ಉಳಿಸಿ ನೀರುಣಿಸಿ, ಜಲಮೂಲ ಉಳಿಸಿ |

Share

ಪುತ್ತೂರಿನ ಎ. ಪಿ. ಸದಾಶಿವ ಮರಿಕೆ ಅವರು ಸಾವಯವ ಕೃಷಿಕರು(Agriculturist). ಇವರು ಕೃಷಿಯಲ್ಲಿ ಅನೇಕ ಪ್ರಯೋಗಗಳನ್ನು ಮಾಡಿದ್ದಾರೆ, ಹಾಗೇ ಮಾಡುತ್ತಲೂ ಇದ್ದಾರೆ. ಈಗ ಕೃಷಿ ಮಾಡುವವರಿಗೆ, ಮುಂದೆ ಮಾಡಲಿರುವವರಿಗೆ ಇವರ ಮಾಹಿತಿ, ಅನುಭವ ಸಾಕಷ್ಟು ಅನುಕೂಲ. ತಮ್ಮ ಕೃಷಿಯ ಅನುಭವಗಳನ್ನು ಬರಹಗಳ ಮೂಲಕ ಅಲ್ಲದೆ ಅನೇಕರಿಗೆ ಸಲಹೆಗಳನ್ನು ನೀಡುತ್ತಾ ಪ್ರೋತ್ಸಾಹಿಸುತ್ತಿದ್ದಾರೆ. ಇಲ್ಲಿ ತಾವು ಕಂಡಿರುವ ತೋಡಿಗೆ ಕಟ್ಟ ಕಟ್ಟಿದ ಬಗ್ಗೆ ಹೇಳಿದ್ದನ್ನು ಕೇಳಿಕೊಂಡು ಪ್ರಭಾವಿತರಾದವರು ಕಟ್ಟ ಕಟ್ಟಿದ ಅನುಭವದ ಬಗ್ಗೆ ಹಂಚಿಕೊಂಡಿದ್ದಾರೆ.ಅದರ ವಿವರವನ್ನು ಅವರೇ ಬರೆದಿದ್ದಾರೆ.. ಇಲ್ಲಿದೆ ವಿವರ...

Advertisement
Advertisement

ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಕೆಮ್ಮಿಂಜೆ ಬಯಲು ಎಂಬಲ್ಲಿ ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡಿರುವವರು  ವಿಜಯಕೃಷ್ಣ ದರ್ಭೆ . ಅವರ ತೋಟದ ಬದಿಯಲ್ಲಿ ಸಣ್ಣದೊಂದು ತೋಡು. ಆ ತೋಡಿನಲ್ಲಿ ಜನವರಿ ಕೊನೆಯವರೆಗೆ ಸಣ್ಣದಾದ ಹರಿವು ಇರುತ್ತದೆಯಂತೆ. ನನ್ನ ತಗಡಿನ ಕಟ್ಟದಿಂದ ಪ್ರೇರಿತರಾಗಿ ಅದಕ್ಕೊಂದು ಕಟ್ಟ ಕಟ್ಟುವ ಯೋಚನೆ ಬಂತಂತೆ. ಕಳೆದ ವರ್ಷ ಆ ಬಗ್ಗೆ ವಿಚಾರ ವಿನಿಮಯ ನಡೆದಿತ್ತು. ಒಂದೇ ಬಾರಿಗೆ ಧುಮುಕಿದರೆ ಹಣ ಪೋಲು ಎಂದಾಗಬಹುದೇ? ಎಂಬ ಭಯದಲ್ಲಿ ಈ ವರ್ಷ ಸರಳ ಕಟ್ಟಕ್ಕೆ ಧುಮುಕಿಯೇ ಬಿಟ್ಟರು.

ಅಲ್ಲೇ ಬದಿಯಲ್ಲಿ ಧಾರಾಳವಾಗಿದ್ದ ಓಟೆ ಬಿದಿರು, ಆಧಾರ ಸ್ತಂಭವಾಗಿ ಮರದ ಗೂಟ, ಗೂಟದ ಭದ್ರತೆಗಾಗಿ ಆಧಾರ ಮೂಂಡು ಇಷ್ಟು ಸಿದ್ಧತೆ ನಡೆಸಿ 17 ಅಡಿ ಅಗಲ, ಮೂರು ಅಡಿ ಎತ್ತರಕ್ಕೆ ಬಿದಿರಿನ ಕಟ್ಟದ ತಯಾರಿಯಾಯಿತು. ನೀರು ನಿಲ್ಲುವುದಕ್ಕಾಗಿ ಎದುರುಬದಿಯಿಂದ ಸಿಲ್ಪಾಲಿನ್ ಶೀಟನ್ನು ಹೊದಿಸಿ ಬಿಟ್ಟರು. ಏರಿ ಬಂದ ನೀರನ್ನು ನೋಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ. ಮುಂದಿನ ವರ್ಷದ ಭದ್ರಕಟ್ಟಕ್ಕಾಗಿ ಮನಸ್ಸಿನ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರಂತೆ. ವಿಜಯ ಕೃಷ್ಣರ ಸ್ಪೂರ್ತಿ ಬೇರೆಯವರಿಗೂ ಕಟ್ಟಕ್ಕೆ ಸ್ಪೂರ್ತಿ ತುಂಬಲಿ.

ಎ. ಪಿ. ಸದಾಶಿವ ಮರಿಕೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

11 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

12 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

12 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

12 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

20 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

21 hours ago