ಪುತ್ತೂರಿನ ಎ. ಪಿ. ಸದಾಶಿವ ಮರಿಕೆ ಅವರು ಸಾವಯವ ಕೃಷಿಕರು(Agriculturist). ಇವರು ಕೃಷಿಯಲ್ಲಿ ಅನೇಕ ಪ್ರಯೋಗಗಳನ್ನು ಮಾಡಿದ್ದಾರೆ, ಹಾಗೇ ಮಾಡುತ್ತಲೂ ಇದ್ದಾರೆ. ಈಗ ಕೃಷಿ ಮಾಡುವವರಿಗೆ, ಮುಂದೆ ಮಾಡಲಿರುವವರಿಗೆ ಇವರ ಮಾಹಿತಿ, ಅನುಭವ ಸಾಕಷ್ಟು ಅನುಕೂಲ. ತಮ್ಮ ಕೃಷಿಯ ಅನುಭವಗಳನ್ನು ಬರಹಗಳ ಮೂಲಕ ಅಲ್ಲದೆ ಅನೇಕರಿಗೆ ಸಲಹೆಗಳನ್ನು ನೀಡುತ್ತಾ ಪ್ರೋತ್ಸಾಹಿಸುತ್ತಿದ್ದಾರೆ. ಇಲ್ಲಿ ತಾವು ಕಂಡಿರುವ ತೋಡಿಗೆ ಕಟ್ಟ ಕಟ್ಟಿದ ಬಗ್ಗೆ ಹೇಳಿದ್ದನ್ನು ಕೇಳಿಕೊಂಡು ಪ್ರಭಾವಿತರಾದವರು ಕಟ್ಟ ಕಟ್ಟಿದ ಅನುಭವದ ಬಗ್ಗೆ ಹಂಚಿಕೊಂಡಿದ್ದಾರೆ.ಅದರ ವಿವರವನ್ನು ಅವರೇ ಬರೆದಿದ್ದಾರೆ.. ಇಲ್ಲಿದೆ ವಿವರ...
ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಕೆಮ್ಮಿಂಜೆ ಬಯಲು ಎಂಬಲ್ಲಿ ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡಿರುವವರು ವಿಜಯಕೃಷ್ಣ ದರ್ಭೆ . ಅವರ ತೋಟದ ಬದಿಯಲ್ಲಿ ಸಣ್ಣದೊಂದು ತೋಡು. ಆ ತೋಡಿನಲ್ಲಿ ಜನವರಿ ಕೊನೆಯವರೆಗೆ ಸಣ್ಣದಾದ ಹರಿವು ಇರುತ್ತದೆಯಂತೆ. ನನ್ನ ತಗಡಿನ ಕಟ್ಟದಿಂದ ಪ್ರೇರಿತರಾಗಿ ಅದಕ್ಕೊಂದು ಕಟ್ಟ ಕಟ್ಟುವ ಯೋಚನೆ ಬಂತಂತೆ. ಕಳೆದ ವರ್ಷ ಆ ಬಗ್ಗೆ ವಿಚಾರ ವಿನಿಮಯ ನಡೆದಿತ್ತು. ಒಂದೇ ಬಾರಿಗೆ ಧುಮುಕಿದರೆ ಹಣ ಪೋಲು ಎಂದಾಗಬಹುದೇ? ಎಂಬ ಭಯದಲ್ಲಿ ಈ ವರ್ಷ ಸರಳ ಕಟ್ಟಕ್ಕೆ ಧುಮುಕಿಯೇ ಬಿಟ್ಟರು.
ಅಲ್ಲೇ ಬದಿಯಲ್ಲಿ ಧಾರಾಳವಾಗಿದ್ದ ಓಟೆ ಬಿದಿರು, ಆಧಾರ ಸ್ತಂಭವಾಗಿ ಮರದ ಗೂಟ, ಗೂಟದ ಭದ್ರತೆಗಾಗಿ ಆಧಾರ ಮೂಂಡು ಇಷ್ಟು ಸಿದ್ಧತೆ ನಡೆಸಿ 17 ಅಡಿ ಅಗಲ, ಮೂರು ಅಡಿ ಎತ್ತರಕ್ಕೆ ಬಿದಿರಿನ ಕಟ್ಟದ ತಯಾರಿಯಾಯಿತು. ನೀರು ನಿಲ್ಲುವುದಕ್ಕಾಗಿ ಎದುರುಬದಿಯಿಂದ ಸಿಲ್ಪಾಲಿನ್ ಶೀಟನ್ನು ಹೊದಿಸಿ ಬಿಟ್ಟರು. ಏರಿ ಬಂದ ನೀರನ್ನು ನೋಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ. ಮುಂದಿನ ವರ್ಷದ ಭದ್ರಕಟ್ಟಕ್ಕಾಗಿ ಮನಸ್ಸಿನ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರಂತೆ. ವಿಜಯ ಕೃಷ್ಣರ ಸ್ಪೂರ್ತಿ ಬೇರೆಯವರಿಗೂ ಕಟ್ಟಕ್ಕೆ ಸ್ಪೂರ್ತಿ ತುಂಬಲಿ.
ಎ. ಪಿ. ಸದಾಶಿವ ಮರಿಕೆ
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…