Advertisement
Opinion

ಜಲಸಂರಕ್ಷಣೆಯ ಮಾದರಿ | ತೋಡಿಗೆ ಕಟ್ಟವ ಕಟ್ಟಿ | ಜೀವಜಲವ ಉಳಿಸಿ ನೀರುಣಿಸಿ, ಜಲಮೂಲ ಉಳಿಸಿ |

Share

ಪುತ್ತೂರಿನ ಎ. ಪಿ. ಸದಾಶಿವ ಮರಿಕೆ ಅವರು ಸಾವಯವ ಕೃಷಿಕರು(Agriculturist). ಇವರು ಕೃಷಿಯಲ್ಲಿ ಅನೇಕ ಪ್ರಯೋಗಗಳನ್ನು ಮಾಡಿದ್ದಾರೆ, ಹಾಗೇ ಮಾಡುತ್ತಲೂ ಇದ್ದಾರೆ. ಈಗ ಕೃಷಿ ಮಾಡುವವರಿಗೆ, ಮುಂದೆ ಮಾಡಲಿರುವವರಿಗೆ ಇವರ ಮಾಹಿತಿ, ಅನುಭವ ಸಾಕಷ್ಟು ಅನುಕೂಲ. ತಮ್ಮ ಕೃಷಿಯ ಅನುಭವಗಳನ್ನು ಬರಹಗಳ ಮೂಲಕ ಅಲ್ಲದೆ ಅನೇಕರಿಗೆ ಸಲಹೆಗಳನ್ನು ನೀಡುತ್ತಾ ಪ್ರೋತ್ಸಾಹಿಸುತ್ತಿದ್ದಾರೆ. ಇಲ್ಲಿ ತಾವು ಕಂಡಿರುವ ತೋಡಿಗೆ ಕಟ್ಟ ಕಟ್ಟಿದ ಬಗ್ಗೆ ಹೇಳಿದ್ದನ್ನು ಕೇಳಿಕೊಂಡು ಪ್ರಭಾವಿತರಾದವರು ಕಟ್ಟ ಕಟ್ಟಿದ ಅನುಭವದ ಬಗ್ಗೆ ಹಂಚಿಕೊಂಡಿದ್ದಾರೆ.ಅದರ ವಿವರವನ್ನು ಅವರೇ ಬರೆದಿದ್ದಾರೆ.. ಇಲ್ಲಿದೆ ವಿವರ...

ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಕೆಮ್ಮಿಂಜೆ ಬಯಲು ಎಂಬಲ್ಲಿ ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡಿರುವವರು  ವಿಜಯಕೃಷ್ಣ ದರ್ಭೆ . ಅವರ ತೋಟದ ಬದಿಯಲ್ಲಿ ಸಣ್ಣದೊಂದು ತೋಡು. ಆ ತೋಡಿನಲ್ಲಿ ಜನವರಿ ಕೊನೆಯವರೆಗೆ ಸಣ್ಣದಾದ ಹರಿವು ಇರುತ್ತದೆಯಂತೆ. ನನ್ನ ತಗಡಿನ ಕಟ್ಟದಿಂದ ಪ್ರೇರಿತರಾಗಿ ಅದಕ್ಕೊಂದು ಕಟ್ಟ ಕಟ್ಟುವ ಯೋಚನೆ ಬಂತಂತೆ. ಕಳೆದ ವರ್ಷ ಆ ಬಗ್ಗೆ ವಿಚಾರ ವಿನಿಮಯ ನಡೆದಿತ್ತು. ಒಂದೇ ಬಾರಿಗೆ ಧುಮುಕಿದರೆ ಹಣ ಪೋಲು ಎಂದಾಗಬಹುದೇ? ಎಂಬ ಭಯದಲ್ಲಿ ಈ ವರ್ಷ ಸರಳ ಕಟ್ಟಕ್ಕೆ ಧುಮುಕಿಯೇ ಬಿಟ್ಟರು.

ಅಲ್ಲೇ ಬದಿಯಲ್ಲಿ ಧಾರಾಳವಾಗಿದ್ದ ಓಟೆ ಬಿದಿರು, ಆಧಾರ ಸ್ತಂಭವಾಗಿ ಮರದ ಗೂಟ, ಗೂಟದ ಭದ್ರತೆಗಾಗಿ ಆಧಾರ ಮೂಂಡು ಇಷ್ಟು ಸಿದ್ಧತೆ ನಡೆಸಿ 17 ಅಡಿ ಅಗಲ, ಮೂರು ಅಡಿ ಎತ್ತರಕ್ಕೆ ಬಿದಿರಿನ ಕಟ್ಟದ ತಯಾರಿಯಾಯಿತು. ನೀರು ನಿಲ್ಲುವುದಕ್ಕಾಗಿ ಎದುರುಬದಿಯಿಂದ ಸಿಲ್ಪಾಲಿನ್ ಶೀಟನ್ನು ಹೊದಿಸಿ ಬಿಟ್ಟರು. ಏರಿ ಬಂದ ನೀರನ್ನು ನೋಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ. ಮುಂದಿನ ವರ್ಷದ ಭದ್ರಕಟ್ಟಕ್ಕಾಗಿ ಮನಸ್ಸಿನ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರಂತೆ. ವಿಜಯ ಕೃಷ್ಣರ ಸ್ಪೂರ್ತಿ ಬೇರೆಯವರಿಗೂ ಕಟ್ಟಕ್ಕೆ ಸ್ಪೂರ್ತಿ ತುಂಬಲಿ.

ಎ. ಪಿ. ಸದಾಶಿವ ಮರಿಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

20 minutes ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

34 minutes ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago