Advertisement
Opinion

ಜಲಸಂರಕ್ಷಣೆಯ ಮಾದರಿ | ತೋಡಿಗೆ ಕಟ್ಟವ ಕಟ್ಟಿ | ಜೀವಜಲವ ಉಳಿಸಿ ನೀರುಣಿಸಿ, ಜಲಮೂಲ ಉಳಿಸಿ |

Share

ಪುತ್ತೂರಿನ ಎ. ಪಿ. ಸದಾಶಿವ ಮರಿಕೆ ಅವರು ಸಾವಯವ ಕೃಷಿಕರು(Agriculturist). ಇವರು ಕೃಷಿಯಲ್ಲಿ ಅನೇಕ ಪ್ರಯೋಗಗಳನ್ನು ಮಾಡಿದ್ದಾರೆ, ಹಾಗೇ ಮಾಡುತ್ತಲೂ ಇದ್ದಾರೆ. ಈಗ ಕೃಷಿ ಮಾಡುವವರಿಗೆ, ಮುಂದೆ ಮಾಡಲಿರುವವರಿಗೆ ಇವರ ಮಾಹಿತಿ, ಅನುಭವ ಸಾಕಷ್ಟು ಅನುಕೂಲ. ತಮ್ಮ ಕೃಷಿಯ ಅನುಭವಗಳನ್ನು ಬರಹಗಳ ಮೂಲಕ ಅಲ್ಲದೆ ಅನೇಕರಿಗೆ ಸಲಹೆಗಳನ್ನು ನೀಡುತ್ತಾ ಪ್ರೋತ್ಸಾಹಿಸುತ್ತಿದ್ದಾರೆ. ಇಲ್ಲಿ ತಾವು ಕಂಡಿರುವ ತೋಡಿಗೆ ಕಟ್ಟ ಕಟ್ಟಿದ ಬಗ್ಗೆ ಹೇಳಿದ್ದನ್ನು ಕೇಳಿಕೊಂಡು ಪ್ರಭಾವಿತರಾದವರು ಕಟ್ಟ ಕಟ್ಟಿದ ಅನುಭವದ ಬಗ್ಗೆ ಹಂಚಿಕೊಂಡಿದ್ದಾರೆ.ಅದರ ವಿವರವನ್ನು ಅವರೇ ಬರೆದಿದ್ದಾರೆ.. ಇಲ್ಲಿದೆ ವಿವರ...

ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಕೆಮ್ಮಿಂಜೆ ಬಯಲು ಎಂಬಲ್ಲಿ ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡಿರುವವರು  ವಿಜಯಕೃಷ್ಣ ದರ್ಭೆ . ಅವರ ತೋಟದ ಬದಿಯಲ್ಲಿ ಸಣ್ಣದೊಂದು ತೋಡು. ಆ ತೋಡಿನಲ್ಲಿ ಜನವರಿ ಕೊನೆಯವರೆಗೆ ಸಣ್ಣದಾದ ಹರಿವು ಇರುತ್ತದೆಯಂತೆ. ನನ್ನ ತಗಡಿನ ಕಟ್ಟದಿಂದ ಪ್ರೇರಿತರಾಗಿ ಅದಕ್ಕೊಂದು ಕಟ್ಟ ಕಟ್ಟುವ ಯೋಚನೆ ಬಂತಂತೆ. ಕಳೆದ ವರ್ಷ ಆ ಬಗ್ಗೆ ವಿಚಾರ ವಿನಿಮಯ ನಡೆದಿತ್ತು. ಒಂದೇ ಬಾರಿಗೆ ಧುಮುಕಿದರೆ ಹಣ ಪೋಲು ಎಂದಾಗಬಹುದೇ? ಎಂಬ ಭಯದಲ್ಲಿ ಈ ವರ್ಷ ಸರಳ ಕಟ್ಟಕ್ಕೆ ಧುಮುಕಿಯೇ ಬಿಟ್ಟರು.

ಅಲ್ಲೇ ಬದಿಯಲ್ಲಿ ಧಾರಾಳವಾಗಿದ್ದ ಓಟೆ ಬಿದಿರು, ಆಧಾರ ಸ್ತಂಭವಾಗಿ ಮರದ ಗೂಟ, ಗೂಟದ ಭದ್ರತೆಗಾಗಿ ಆಧಾರ ಮೂಂಡು ಇಷ್ಟು ಸಿದ್ಧತೆ ನಡೆಸಿ 17 ಅಡಿ ಅಗಲ, ಮೂರು ಅಡಿ ಎತ್ತರಕ್ಕೆ ಬಿದಿರಿನ ಕಟ್ಟದ ತಯಾರಿಯಾಯಿತು. ನೀರು ನಿಲ್ಲುವುದಕ್ಕಾಗಿ ಎದುರುಬದಿಯಿಂದ ಸಿಲ್ಪಾಲಿನ್ ಶೀಟನ್ನು ಹೊದಿಸಿ ಬಿಟ್ಟರು. ಏರಿ ಬಂದ ನೀರನ್ನು ನೋಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ. ಮುಂದಿನ ವರ್ಷದ ಭದ್ರಕಟ್ಟಕ್ಕಾಗಿ ಮನಸ್ಸಿನ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರಂತೆ. ವಿಜಯ ಕೃಷ್ಣರ ಸ್ಪೂರ್ತಿ ಬೇರೆಯವರಿಗೂ ಕಟ್ಟಕ್ಕೆ ಸ್ಪೂರ್ತಿ ತುಂಬಲಿ.

ಎ. ಪಿ. ಸದಾಶಿವ ಮರಿಕೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

2 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

7 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

14 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

14 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

22 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

1 day ago