Advertisement
Opinion

ಜಲಸಂರಕ್ಷಣೆಯ ಮಾದರಿ | ತೋಡಿಗೆ ಕಟ್ಟವ ಕಟ್ಟಿ | ಜೀವಜಲವ ಉಳಿಸಿ ನೀರುಣಿಸಿ, ಜಲಮೂಲ ಉಳಿಸಿ |

Share

ಪುತ್ತೂರಿನ ಎ. ಪಿ. ಸದಾಶಿವ ಮರಿಕೆ ಅವರು ಸಾವಯವ ಕೃಷಿಕರು(Agriculturist). ಇವರು ಕೃಷಿಯಲ್ಲಿ ಅನೇಕ ಪ್ರಯೋಗಗಳನ್ನು ಮಾಡಿದ್ದಾರೆ, ಹಾಗೇ ಮಾಡುತ್ತಲೂ ಇದ್ದಾರೆ. ಈಗ ಕೃಷಿ ಮಾಡುವವರಿಗೆ, ಮುಂದೆ ಮಾಡಲಿರುವವರಿಗೆ ಇವರ ಮಾಹಿತಿ, ಅನುಭವ ಸಾಕಷ್ಟು ಅನುಕೂಲ. ತಮ್ಮ ಕೃಷಿಯ ಅನುಭವಗಳನ್ನು ಬರಹಗಳ ಮೂಲಕ ಅಲ್ಲದೆ ಅನೇಕರಿಗೆ ಸಲಹೆಗಳನ್ನು ನೀಡುತ್ತಾ ಪ್ರೋತ್ಸಾಹಿಸುತ್ತಿದ್ದಾರೆ. ಇಲ್ಲಿ ತಾವು ಕಂಡಿರುವ ತೋಡಿಗೆ ಕಟ್ಟ ಕಟ್ಟಿದ ಬಗ್ಗೆ ಹೇಳಿದ್ದನ್ನು ಕೇಳಿಕೊಂಡು ಪ್ರಭಾವಿತರಾದವರು ಕಟ್ಟ ಕಟ್ಟಿದ ಅನುಭವದ ಬಗ್ಗೆ ಹಂಚಿಕೊಂಡಿದ್ದಾರೆ.ಅದರ ವಿವರವನ್ನು ಅವರೇ ಬರೆದಿದ್ದಾರೆ.. ಇಲ್ಲಿದೆ ವಿವರ...

ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಕೆಮ್ಮಿಂಜೆ ಬಯಲು ಎಂಬಲ್ಲಿ ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡಿರುವವರು  ವಿಜಯಕೃಷ್ಣ ದರ್ಭೆ . ಅವರ ತೋಟದ ಬದಿಯಲ್ಲಿ ಸಣ್ಣದೊಂದು ತೋಡು. ಆ ತೋಡಿನಲ್ಲಿ ಜನವರಿ ಕೊನೆಯವರೆಗೆ ಸಣ್ಣದಾದ ಹರಿವು ಇರುತ್ತದೆಯಂತೆ. ನನ್ನ ತಗಡಿನ ಕಟ್ಟದಿಂದ ಪ್ರೇರಿತರಾಗಿ ಅದಕ್ಕೊಂದು ಕಟ್ಟ ಕಟ್ಟುವ ಯೋಚನೆ ಬಂತಂತೆ. ಕಳೆದ ವರ್ಷ ಆ ಬಗ್ಗೆ ವಿಚಾರ ವಿನಿಮಯ ನಡೆದಿತ್ತು. ಒಂದೇ ಬಾರಿಗೆ ಧುಮುಕಿದರೆ ಹಣ ಪೋಲು ಎಂದಾಗಬಹುದೇ? ಎಂಬ ಭಯದಲ್ಲಿ ಈ ವರ್ಷ ಸರಳ ಕಟ್ಟಕ್ಕೆ ಧುಮುಕಿಯೇ ಬಿಟ್ಟರು.

ಅಲ್ಲೇ ಬದಿಯಲ್ಲಿ ಧಾರಾಳವಾಗಿದ್ದ ಓಟೆ ಬಿದಿರು, ಆಧಾರ ಸ್ತಂಭವಾಗಿ ಮರದ ಗೂಟ, ಗೂಟದ ಭದ್ರತೆಗಾಗಿ ಆಧಾರ ಮೂಂಡು ಇಷ್ಟು ಸಿದ್ಧತೆ ನಡೆಸಿ 17 ಅಡಿ ಅಗಲ, ಮೂರು ಅಡಿ ಎತ್ತರಕ್ಕೆ ಬಿದಿರಿನ ಕಟ್ಟದ ತಯಾರಿಯಾಯಿತು. ನೀರು ನಿಲ್ಲುವುದಕ್ಕಾಗಿ ಎದುರುಬದಿಯಿಂದ ಸಿಲ್ಪಾಲಿನ್ ಶೀಟನ್ನು ಹೊದಿಸಿ ಬಿಟ್ಟರು. ಏರಿ ಬಂದ ನೀರನ್ನು ನೋಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ. ಮುಂದಿನ ವರ್ಷದ ಭದ್ರಕಟ್ಟಕ್ಕಾಗಿ ಮನಸ್ಸಿನ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರಂತೆ. ವಿಜಯ ಕೃಷ್ಣರ ಸ್ಪೂರ್ತಿ ಬೇರೆಯವರಿಗೂ ಕಟ್ಟಕ್ಕೆ ಸ್ಪೂರ್ತಿ ತುಂಬಲಿ.

ಎ. ಪಿ. ಸದಾಶಿವ ಮರಿಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago