Advertisement
ಸುದ್ದಿಗಳು

#Savekarnataka | ಕೊರೊನಾದಂತಹ ಪರಿಸ್ಥಿತಿಯಲ್ಲಿ ಕೇರಳದಿಂದ ಬರುವವರಿಗೆ ಮಂಗಳೂರಿನಲ್ಲಿ ಚಿಕಿತ್ಸೆ ಬೇಡ | ಜಿಲ್ಲೆಯ ಜನರ ರಕ್ಷಣೆಯತ್ತ ಚಿತ್ತ | ಟ್ವಿಟ್ಟರ್ ನಲ್ಲಿ ಟ್ರೆಂಡ್ ಆದ #Savekarnataka |

Share

ಮಂಗಳೂರು: ಕೊರೊನಾ ವೈರಸ್ ಹರಡುವ ಇಂತಹ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ರಕ್ಷಿಸಲು ಕಾಸರಗೋಡು ಹಾಗೂ ಕೇರಳದ ಕಡೆಯಿಂದ ಮಂಗಳೂರಿಗೆ ಚಿಕಿತ್ಸೆಗೆ ಬರುವುದು ತಡೆಯಬೇಕು ಎಂದು ಕಳೆದ ಅನೇಕ ದಿನಗಳಿಂದ ಭಾರೀ ಚರ್ಚೆಯಾಗುತ್ತಿತ್ತು. ಈ ಬಗ್ಗೆ ಕೇರಳ ಸರಕಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದೀಗ ಟ್ವಿಟ್ಟರ್ ನಲ್ಲಿ #Savekarnataka  ಎಂಬ ಹ್ಯಾಶ್ ಟ್ಯಾಗ್ ಈಗ ಟ್ರೆಂಡ್ ಆಗಿದೆ. ಸಾವಿರಾರು ಜನರು ಈ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ಯಾವುದೇ ಕಾರಣಕ್ಕೂ ಮಂಗಳೂರಿಗೆ ಬರಬಾರದು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಹರಡುವ ಸಂದರ್ಭ ಕೇರಳ-ಕರ್ನಾಟಕ ಗಡಿ ಭಾಗದ ರಸ್ತೆ ಬಂದ್ ಮಾಡಲಾಗಿತ್ತು. ಬಳಿಕ  ಮಂಗಳೂರು-ಕಾಸರಗೋಡು ಗಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಗಳನ್ನು ತುರ್ತು ವೈದ್ಯಕೀಯ ಸೇವೆಗಳಿಗಾಗಿ ತಕ್ಷಣ ತೆರವುಗೊಳಿಸುವಂತೆ ಕೇರಳ ಸರಕಾರ ಕೇಂದ್ರ ಸರಕಾರ ಹಾಗೂ ಕೇರಳ ಹೈಕೋರ್ಟ್ ಮುಂದೆ ಹೋಗಿತ್ತು.

ಇದೀಗ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಮತ್ತು  ಸಾರ್ವಜನಿಕರು ಟ್ವಿಟ್ಟರ್ ಮೂಲಕ ಒತ್ತಾಯ ಮಾಡಿದ್ದಾರೆ. ಮಂಗಳೂರು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಈಗಾಗಲೇ ಮಂಗಳೂರು ಡೇಂಜರ್ ಝೋನ್ ನಲ್ಲಿ  ಇರುವುದರಿಂದ ಮಂಗಳೂರು ಜನತೆಯ ಸುರಕ್ಷತೆ ಅಗತ್ಯವಾಗಿದೆ ಎಂದು ಟ್ವಿಟ್ಟರ್ ನಲ್ಲಿ ಒತ್ತಾಯ ಕೇಳಿಬಂದಿದೆ. ಸಂಸದ ನಳಿನ್ ಕುಮಾರ್ ಕಟೀಲು  ಅವರು ಕೊರೊನಾ ದಂತಹ ಮಾರಣಾಂತಿಕ ಖಾಯಿಲೆಯ ಸಂದರ್ಭದಲ್ಲಿ ನಮ್ಮ ರಾಜ್ಯದ ಜನರ ರಕ್ಷಣೆಯೆ ನಮ್ಮ‌ ಮೊದಲ ಆದ್ಯತೆ ಅದರಲ್ಲಿ ಯಾವ ಅನುಮಾನವೂ ಬೇಡ ಎಂದು ಹೇಳಿದ್ದಾರೆ.

ಜನಪ್ರತಿನಿಧಿಗಳು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು  ವ್ಯಂಗ್ಯ ಮಾಡಿದ್ದಾರೆ. ಕೇರಳದ ಮಾದರಿ ವಿಶೇಷ ಹಾಗೂ ಉತ್ತಮ ಎಂದಿರುವವರು ಈಗ ಏಕೆ ಮಂಗಳೂರಿಗೆ ಹಠ ಹಿಡಿಯುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

33 minutes ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 hour ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

10 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

12 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

20 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 day ago