Advertisement
Uncategorized

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Share

ಕರ್ನಾಟಕದಲ್ಲಿ ಮುಸ್ಲಿಮರ ಮೀಸಲಾತಿ· ರದ್ದುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಮೇ 9 ರವರೆಗೆ ಈ ಆದೇಶವನ್ನು ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಹೇಳಿದೆ.

Advertisement
Advertisement

2ಬಿ ಅಡಿ ಮುಸ್ಲಿಮರಿಗಿದ್ದ ಶೇ.4 ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿತ್ತು. ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ. ನ್ಯಾ. ಕೆ.ಎಂ. ಜೋಸೆಫ್‌ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮೇ 9 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲಿಯವರೆಗೂ ಮೀಸಲಾತಿ ಜಾರಿಗೆ ನ್ಯಾಯಾಲಯ ತಡೆ ನೀಡಿದೆ. 

Advertisement

ಅಫಿಡವಿಟ್‌ ಸಿದ್ಧವಾಗಿದೆ. ಆದರೆ ಸಾಂವಿಧಾನಿಕ ಪೀಠದ ವಿಚಾರಣೆಯಲ್ಲಿದ್ದೇನೆ. ಹೀಗಾಗಿ ವಿಚಾರಣೆ ಮುಂದೂಡಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇದಕ್ಕೆ ಅರ್ಜಿದಾರ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ಅರ್ಜಿದಾರ ಪರ ವಕೀಲರಾದ ದುಷ್ಯಂತ್‌ ದವೆ, ಇದು ಅತ್ಯಂತ ಮಹತ್ವದ ಪ್ರಕರಣ. ವಿಚಾರಣೆ ಮುಂದೂಡಬಾರದು ಎಂದು ಕೋರ್ಟ್‌ಗೆ ಮನವಿ ಮಾಡಿದ್ದರು.

ಪೀಠವು, ವಾದ ಪ್ರತಿವಾದ ಆಲಿಸಿದ ಬಳಿಕ ಮೇ 9 ಕ್ಕೆ ವಿಚಾರಣೆ ಮುಂದೂಡಿದೆ. ಅರ್ಜಿ ವಿಚಾರಣೆಗೆ ಮುಂದೂಡಿಕೆ ಆಕ್ಷೇಪ ಹಿನ್ನಲೆ ಹಳೆ ಆದೇಶ ಮುಂದುವರಿಸುವುದಾಗಿ ಕೋರ್ಟ್‌ ಹೇಳಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.09.2024 | ರಾಜ್ಯದಲ್ಲಿ ಮತ್ತೆ ಕೆಲವು ಕಡೆ ಮಳೆ ಸಾಧ್ಯತೆ

23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

22 hours ago

ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರಕ್ಕೆ ಸೂಚನೆ |

ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರ ಒದಗಿಸಬೇಕು. ಜಂಟಿ…

2 days ago

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲ

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ…

2 days ago

ಪ್ಲಾಸ್ಟಿಕ್ ಪೆಟ್, ಬಾಟಲ್ ಗಳ ಬಳಕೆ ನಿಷೇಧ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪೆಟ್ ಮತ್ತು ಬಾಟಲ್…

2 days ago

ಅಭಿವೃದ್ಧಿಯಾಗದ ಎರಡು ತಾಲೂಕು ಸಂಪರ್ಕದ ಗ್ರಾಮೀಣ ರಸ್ತೆ | ಪ್ರಧಾನಿ ಕಚೇರಿವರೆಗೂ ತಲಪಿತ್ತು ಬೇಡಿಕೆ | ನೂತನ ಸಂಸದರಿಗೂ ಮನವಿ |

ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಬೆಸೆಯುವ ಪರ್ಲಿಕಜೆ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗಾಗಿ ಎರಡು ದಶಕಗಳಿಂದ…

2 days ago

ಹವಾಮಾನ ವರದಿ | 21-09-2024 | ನಾಳೆಯಿಂದ ಮಳೆ ಜಾಸ್ತಿಯಾಗುವ ನಿರೀಕ್ಷೆ |

ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ…

2 days ago